ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…