ಮಂಗಳೂರು: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ವಿಧುಷಿ ಕಮಲಾ ಭಟ್ (7೦) ಅವರು ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.
ನಾಟ್ಯಾಲಯ ಊರ್ವ ಸಂಸ್ಥೆಯ ನಿರ್ದೇಶಕರಾಗಿದ್ದ ಕಮಲಾಭಟ್ ಅವರು ಸುಮಾರು ೪೫ ವರ್ಷಗಳಿಂದ ನೃತ್ಯ ಸೇವೆಯಲ್ಲಿ ತೊಡಗಿದ್ದರು.
ಕರ್ನಾಟಕ ಕಲಾಶ್ರೀ, ಪೇಜಾವರ ಶ್ರೀ ವಿಶ್ವೇಶ್ವರ ಶ್ರೀಪಾದರಿಂದ ಶ್ರೀ ರಾಮ ವಿಠಲ ಪುರಸ್ಕಾರ, ಶೃಂಗೇರಿ ಸಂಸ್ಥಾನದಿಂದ ಸನ್ಮಾನ, ಕಲ್ಕೂರ ಪ್ರತಿಷ್ಠಾನದಿಂದ ರಾಜ್ಯೋತ್ಸವ ಗೌರವ ಪುರಸ್ಕಾರ, ಬಿಲ್ಲವ ಸಂಘ ಅಶೋಕನಗರ ಸಂಘಟನೆಯಿಂದ ಪುರಸ್ಕಾರ, ನಾಟ್ಯಕಲಾನಿಧಿ, ನಾಟ್ಯಕಲಾ ಸಂಪನ್ನೇ, ನಾಟ್ಯ ವಿಶಾರದೆ, ರೋಟರಿ ಲಯನ್ ಸಂಸ್ಥೆಗಳಿಂದ ಪುರಸ್ಕಾರಗಳು, ಸಾರ್ವಜನಿಕವಾಗಿ ಜೀವಮಾನ ಸಾಧನೆಗಾಗಿ ’ಸಾರ್ಥಕ ’ ಗೌರವ ಸನ್ಮಾನ. ಮೊದಲಾದ ಗೌರವ ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದರು. ಭರತಾಂಜಲಿ ನೃತ್ಯ ಸಂಸ್ಥೆ ಕೊಟ್ಟಾರ, ನೃತ್ಯ ಸುಧಾ ಮೇರಿಹಿಲ್, ಚಿಗುರು ನೃತ್ಯ ಸಂಸ್ಥೆ ಬೆಂಗಳೂರು ಸಂಸ್ಥೆಗಳ ಮಾರ್ಗದರ್ಶಕರಾಗಿದ್ದರು.
ನಾಟ್ಯಕಲೆಯ ಪಾವಿತ್ರ್ಯತೆಯನ್ನು ಕರಗತಗೊಳಿಸುತ್ತಾ ನಾವಿನ್ಯತೆಗಳನ್ನು ಸೃಷ್ಟಿಸಿದ ನೃತ್ಯ ಕ್ಷೇತ್ರದ ಅಜಾತ ಶತ್ರು ನೃತ್ಯ ಗುರುವಾಗಿದ್ದ ಕಮಲ ಭಟ್ ಆಗಲಿಕಗೆ ಗಣ್ಯೆರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಗ ಸೇರಿದಂತೆ ಅಪಾರ ಶಿಷ್ಯವರ್ಗವನ್ನು ಅವರು ಆಗಲಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…