ಮಂಗಳೂರು: ಮುಂಬರುವ ಜಿ.ಪಂ. ತಾ. ಪಂ. ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕರಾವಳಿಯ ಜನತೆ ಎಎಪಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ರಾಜ್ಯದಲ್ಲಿ ಎಲ್ಲ ಇಲಾಖೆಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ಲಂಚ ನೀಡದೆ ಯಾವುದೇ ಕೆಲಸಗಳಾಗುತ್ತಿಲ್ಲ. ಮುಂಚೂಣಿಯಲ್ಲಿರುವ ರಾಜಕೀಯ ಪಕ್ಷಗಳು ಕೂಡ ಈ ವಿಷಯದಲ್ಲಿ ಮೌನವಹಿಸಿವೆ. ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷ ಆರಂಭಗೊಂಡಿದ್ದು, ದೆಹಲಿಯಲ್ಲಿ ಅಧಿಕಾರ ವಹಿಸಿಕೊಂಡಿದೆ. ಮಂಗಳೂರು ನಗರದ ಜನತೆಯ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಎಎಪಿಯ ಮುಖ್ಯ ಧ್ಯೇಯವಾಗಿದೆ. ಜಾತಿ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿಪರ ಇರುವ ಆಮ್ ಆದ್ಮಿ ಪಕ್ಷಕ್ಕೆ ಕರಾವಳಿಯ ಜನ ಬೆಂಬಲಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಕುಟುಂಬ ರಾಜಕಾರಣದಿಂದ ಅಭಿವೃದ್ಧಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಕುಟುಂಬ ರಾಜಕಾರಣದ ಜೆಡಿಎಸ್ ಜತೆ ಅವರು ಮೈತ್ರಿ ಮಾಡಿದ್ದು ಎಷ್ಟು ಸರಿ? ಬಿಜೆಪಿಯ ಕೆಲವರು ಕುಟುಂಬ ರಾಜಕಾರಣದಲ್ಲಿದ್ದಾರೆ. ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಮುಂತಾದ ನಾಯಕರಲ್ಲಿ ಕುಟುಂಬ ರಾಜಕಾರಣವಿದೆ ಎಂದು ಅರೋಪಿಸಿದರು.
ಕಾಂಗ್ರೆಸ್ ಕಿತಾಪತಿಯಿಂದ ಇಂಡಿಯಾ ಒಕ್ಕೂಟ ದಿಕ್ಕಾಪಾಲಾಗುತ್ತಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು ಎನ್ನುವುದು ಎಎಪಿ ಗುರಿಯಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಣಬಲದಲ್ಲಿ ಬಲಿಷ್ಟವಾಗಿದೆ. ಹಣ ಬಲದಲ್ಲಿ ಅವರೊಂದಿಗೆ ಆಮ್ ಆದ್ಮಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ ಎಂದರು.
ತುಳುಭಾಷೆಗೆ ಸಾಂವಿಧಾನಿಕ ಸ್ಥಾನ ಸಿಗಬೇಕು. ಅದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಮಂಗಳೂರಿನವರ ಕನ್ನಡವೂ ಕೂಡ ಉತ್ತಮವಾಗಿದೆ ಎಂದರು
ಆಪ್ ಜಿಲ್ಲಾಧ್ಯಕ್ಷ ವಿಶು ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಮುದಿಗೌಡರ್, ರಾಜ್ಯ ಒಬಿಸಿ ಘಟಕ ಅಧ್ಯಕ್ಷ ಬಿ. ನವೀನ್ ಚಂದ್ರ ಪೂಜಾರಿ, ಉಪಾಧ್ಯಕ್ಷ ವಿವೇಕಾನಂದ ಸಾಲ್ಯಾನ್, ಕಾರ್ಯದರ್ಶಿಗಳಾದ ಕಬೀರ್ ಕಾಟಿಪಳ್ಳ, ಸೀಮಾ ಮಡಿವಾಳ ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…