ಜನ ಮನದ ನಾಡಿ ಮಿಡಿತ

Advertisement

ಹನಗೋಡು ಹೋಬಳಿ ವ್ಯಾಪ್ತಿಯ ಮಂಗಳೂರು ಮಾಳ ಮತ್ತು ಬಿಜಾಪುರ ಕಾಲೋನಿಗೆ ಜಿ.ಪಂ. ಸಿ ಇ ಓ‌ ಗಾಯಿತ್ರಿ ಭೇಟಿ..!!

ಹುಣಸೂರು: ಹನಗೋಡು ಹೋಬಳಿ ವ್ಯಾಪ್ತಿಯ ಮಂಗಳೂರು ಮಾಳ ಮತ್ತು ಬಿಜಾಪುರ ಕಾಲೋನಿಗೆ ಜಿ.ಪಂ. ಸಿ ಇ ಓ‌ ಗಾಯಿತ್ರಿ ಭೇಟಿ ಜನರ ಸಮಸ್ಯೆಗಳನ್ನು ಆಲಿಸಿ , ಕೂಡಲೇ ಬಗೆಹರಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಬುಧವಾರದಂದು ಮಂಗಳೂರು ಮಾಳ ಮತ್ತು ಬಿಜಾಪುರ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯರೊಂದಿಗೆ ಚರ್ಚಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದಲ್ಲಿ ಮ-ನರೇಗಾದಿಂದ ಚರಂಡಿ ವ್ಯವಸ್ಥೆ, ಮಕ್ಕಳ ಲಾಲನೆ ಪಾಲನೆಗೆ ಅವಶ್ಯಕ ಅಂಗನವಾಡಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಕ್ಕಳ ಕಲಿಕೆಗೆ ಅಡಚಣೆಯಾಗುತ್ತಿರುವುದನ್ನು ಮನಗಂಡು ಗ್ರಾಮದ ಸರ್ಕಾರಿ ಶಾಲೆಯ ಒಂದು ಕೊಠಡಿಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅಂಗನವಾಡಿ ನಡೆಸಲು‌ ಸ್ಥಳಾವಕಾಶ ಮಾಡಿಕೊಡಲು‌ಮುಖ್ಯೋಪಾಧ್ಯಾರಿಗೆ ಸೂಚಿಸಿದರು.

ಗ್ರಾಮದಲ್ಲಿ ಕೈಗೊಂಡಿರುವ ಜೆಜೆಎಂ ಕಾಮಗಾರಿಯಡಿ ಮನೆಗಳಿಗೆ ಒದಗಿಸಿರುವ ನೀರಿನ ಸಂಪರ್ಕ ವ್ಯವಸ್ಥೆಯನ್ನು ಪರಿಶೀಲಿಸುವುದರೊಂದಿಗೆ ಮಳೆಗಾಲದಲ್ಲಿ ಗ್ರಾಮಕ್ಕೆ ಹತ್ತಿರದಲ್ಲಿರುವ ಕೆರೆಯ ನೀರು ಶಾಲಾ ಆವರಣದೊಳಗೆ ನುಗ್ಗುವುದರಿಂದಾಗುವ ಅನಾಹುತದ ಬಗ್ಗೆ ತಿಳಿದು, ನರೇಗಾ ಯೋಜನೆಯಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಶಾಲಾ ಆವರಣದಲ್ಲಿ ಆಟದ ಮೈದಾನ ನಿರ್ಮಾಣ ಮಾಡುವಂತೆ ತಿಳಿಸಿದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಪಿ.ಆರ್.ಇ.ಡಿ ಎಇಇ ಪುಟ್ಟ ನಾಗರಾಜು, ತಾಲ್ಲೂಕು ಯೋಜನಾಧಿಕಾರಿ ರಾಜೇಶ್, ನರೇಗಾ ಸಹಾಯಕ ನಿರ್ದೇಶಕ ಗಿರಿಧರ್ ಸೇರಿದಂತೆ ಗ್ರಾ.ಪಂ. ಅಧ್ಯಕ್ಷರು, ಪಿಡಿಒ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು
ಇದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!