ಹುಣಸೂರು: ಹನಗೋಡು ಹೋಬಳಿ ವ್ಯಾಪ್ತಿಯ ಮಂಗಳೂರು ಮಾಳ ಮತ್ತು ಬಿಜಾಪುರ ಕಾಲೋನಿಗೆ ಜಿ.ಪಂ. ಸಿ ಇ ಓ ಗಾಯಿತ್ರಿ ಭೇಟಿ ಜನರ ಸಮಸ್ಯೆಗಳನ್ನು ಆಲಿಸಿ , ಕೂಡಲೇ ಬಗೆಹರಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರದಂದು ಮಂಗಳೂರು ಮಾಳ ಮತ್ತು ಬಿಜಾಪುರ ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯರೊಂದಿಗೆ ಚರ್ಚಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದಲ್ಲಿ ಮ-ನರೇಗಾದಿಂದ ಚರಂಡಿ ವ್ಯವಸ್ಥೆ, ಮಕ್ಕಳ ಲಾಲನೆ ಪಾಲನೆಗೆ ಅವಶ್ಯಕ ಅಂಗನವಾಡಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಕ್ಕಳ ಕಲಿಕೆಗೆ ಅಡಚಣೆಯಾಗುತ್ತಿರುವುದನ್ನು ಮನಗಂಡು ಗ್ರಾಮದ ಸರ್ಕಾರಿ ಶಾಲೆಯ ಒಂದು ಕೊಠಡಿಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವವರೆಗೆ ಅಂಗನವಾಡಿ ನಡೆಸಲು ಸ್ಥಳಾವಕಾಶ ಮಾಡಿಕೊಡಲುಮುಖ್ಯೋಪಾಧ್ಯಾರಿಗೆ ಸೂಚಿಸಿದರು.
ಗ್ರಾಮದಲ್ಲಿ ಕೈಗೊಂಡಿರುವ ಜೆಜೆಎಂ ಕಾಮಗಾರಿಯಡಿ ಮನೆಗಳಿಗೆ ಒದಗಿಸಿರುವ ನೀರಿನ ಸಂಪರ್ಕ ವ್ಯವಸ್ಥೆಯನ್ನು ಪರಿಶೀಲಿಸುವುದರೊಂದಿಗೆ ಮಳೆಗಾಲದಲ್ಲಿ ಗ್ರಾಮಕ್ಕೆ ಹತ್ತಿರದಲ್ಲಿರುವ ಕೆರೆಯ ನೀರು ಶಾಲಾ ಆವರಣದೊಳಗೆ ನುಗ್ಗುವುದರಿಂದಾಗುವ ಅನಾಹುತದ ಬಗ್ಗೆ ತಿಳಿದು, ನರೇಗಾ ಯೋಜನೆಯಡಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಶಾಲಾ ಆವರಣದಲ್ಲಿ ಆಟದ ಮೈದಾನ ನಿರ್ಮಾಣ ಮಾಡುವಂತೆ ತಿಳಿಸಿದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಪಿ.ಆರ್.ಇ.ಡಿ ಎಇಇ ಪುಟ್ಟ ನಾಗರಾಜು, ತಾಲ್ಲೂಕು ಯೋಜನಾಧಿಕಾರಿ ರಾಜೇಶ್, ನರೇಗಾ ಸಹಾಯಕ ನಿರ್ದೇಶಕ ಗಿರಿಧರ್ ಸೇರಿದಂತೆ ಗ್ರಾ.ಪಂ. ಅಧ್ಯಕ್ಷರು, ಪಿಡಿಒ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು
ಇದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…