ಮಂಗಳೂರು: “ಬಂಟ್ವಾಳ ತಾಲೂಕು, ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದು ಇದರಿಂದಾಗಿ ಪರಿಸರದಲ್ಲಿ ದುರ್ವಾಸನೆ ಹರಡಿ ಮಾರಕ ರೋಗಗಳಾದ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳಿಗೆ ಇಲ್ಲಿಯ ಮಂದಿ ತುತ್ತಾಗುತ್ತಿದ್ದಾರೆ.ತಕ್ಷಣ ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ“ ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಅವರು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
”ಸದ್ರಿ ಹೊಂಡದ ಬದಿಯಲ್ಲಿಯೇ ಪಂಚಾಯತ್ ವತಿಯಿಂದ ಕೊರೆದ ಕೊಳವೆ ಬಾವಿ, ಹಾಗೇನೆ ಸರಕಾರದ ವತಿಯಿಂದ ತೋಡಿಸಲಾದ 2 ನೀರಿನ ಬಾವಿಗಳಿಗೆ ಈ ತ್ಯಾಜ್ಯ ಸಂಗ್ರಹದ ಕಲ್ಮಶ ನೀರು ಸೋರಿ ಬಾವಿಗಳ ಹಾಗೂ ಕೊಳವೆ ಬಾವಿಗಳ ನೀರನ್ನೇ ಈ ವಠಾರದಲ್ಲಿ ವಾಸಿಸುವ ಮಂದಿ ಕುಡಿಯಲು, ಅಡುಗೆ ಮಾಡಲು ಬಳಸುವಂತ ಪರಿಸ್ಥಿತಿ ಇದೆ. ಅದೂ ಅಲ್ಲದೆ ತ್ಯಾಜ್ಯದ ಪಕ್ಕದಲ್ಲಿಯೇ ಕಾರ್ಯಾಚರಿಸುತ್ತಿರುವ
ಅಂಗನವಾಡಿಯಲ್ಲಿ 15 ಮಂದಿ ಪುಟ್ಟ ಪುಟ್ಟ ಮಕ್ಕಳು ಕೂಡಾ ಈ ಪರಿಸರದಲ್ಲಿಯೇ ಇದ್ದಾರೆ. ಇದರ ಸಮೀಪವೇ ಶಾಲೆ ಇದ್ದು ಇಡೀ ಬಾಳೆಪುಣಿ ವಠಾರವೇ ದುರ್ಗಂಧಮಯವಾಗಿದ್ದು ಕುಡಿಯಲು ಶುದ್ಧ ನೀರಿಲ್ಲದೆ, ಉಸಿರಾಡಲು ಶುದ್ಧ ಗಾಳಿ ಇಲ್ಲದೆ ಬದುಕುತ್ತಿರುವ ಇಲ್ಲಿಯ ಜನರ, ಮಕ್ಕಳ, ಮಹಿಳೆಯರ ಬದುಕೇ ನರಕ ಸದೃಶ್ಯವಾಗಿದೆ ಮತ್ತು ಇದರ ಪಕ್ಕದಲ್ಲಿಯೇ ಕೊರಗಜ್ಜನ ದೈವಸ್ಥಾನ
ಹಾಗೂ ಇನ್ನಿತರ ಕೆಲವು ದೇವಸ್ಥಾನಗಳಿವೆ. ಇದರ ಬಗ್ಗೆ ಬಾಳೆಪುಣಿ ಗ್ರಾಮ ಪಂಚಾಯತ್ ಗೆ ದೂರು ನೀಡಿದ್ದರೂ ತ್ಯಾಜ್ಯ ಹಾಕುವ ಗುಂಡಿಯನ್ನು ಸದ್ರಿ ಗ್ರಾಮದಲ್ಲಿರುವ ಇತರ ಖಾಲಿ
ಸರಕಾರದ ಜಾಗ ಕೂಡಾ ಇದ್ದು ಸುಮಾರು 10 ಎಕ್ರೆ ಜಮೀನನ್ನು ಸರಕಾರದ ವಿವಿಧ ಯೋಜನೆಗೆ ಬಳಸಲು ಕಾದಿರಿಸಿದ್ದು ಸ್ಥಳಾಂತರಿಸಲು ವಿನಂತಿಸಿದರೂ ಗ್ರಾಮ ಪಂಚಾಯತ್ ಯಾವುದೇ ಕ್ರಮ
ಕೈಗೊಂಡಿಲ್ಲ“ ಎಂದು ಆರೋಪಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಯಶವಂತ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…