ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು ಕನ್ನಡ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ ನಡೆಯಿತು.
ಒಟ್ಟು ಮೂವತ್ತು ದಿನದ ಚಿತ್ರೀಕರಣದ ಈ ಸಿನಿಮಾ ಎರಡು ಹಂತದಲ್ಲಿ ಚಿತ್ರೀಕರಿಸಲ್ಟಟ್ಟಿತ್ತು. ತುಳು ಸಿನಿಮಾ ರಂಗದಲ್ಲಿ ಪ್ರಪ್ರಥಮ ಬಾರಿಗೆ ವಿಭಿನ್ನ, ವಿಷೇಶ ತಂತ್ರಜ್ಞಾನವನ್ನು ಈ ಸಿನಿಮಾದ ಮೂಲಕ ಪರಿಚಯಿಸುತ್ತಿದೆ. ಉತ್ತಮ ಕಥಾವಸ್ತು ಇರುವ ಈ ಚಿತ್ರದಲ್ಲಿ ಹಾಸ್ಯಕ್ಕೂ ಅಷ್ಟೇ ಒತ್ತುಕೊಟ್ಟಿದೆ.
ಇರಾ, ಮುಡಿಪು, ವರ್ಕಾಡಿ, ಕೂಟತ್ತಾಜೆ,ಬೋಳಿಯಾರ್ ಕೊಕ್ಕಡ ಮುಂತಾದ ಕಡೆ ಚಿತ್ರೀಕರಿಸಾಲಾಗಿತ್ತು..
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿರಾಮಕುಂಜ, ಶಿವಪ್ರಕಾಶ್ ಪೂಂಜ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ರಕ್ಷಣ್ ಮಾಡೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ವಿಜಯಹರಿ ರೈ, ದಯಾನಂದ ರೈ ಬೆಟ್ಟಂಪಾಡಿ, ರೂಪಶ್ರೀ ವರ್ಕಾಡಿ, ಜಯಶೀಲ ಮಂಗಳೂರು, ರಾಧಿಕಾ ಭಟ್, ಭಾಸ್ಕರ್ ಮಣಿಪಾಲ ಹಾಗೂ ನಾಯಕಿಯಾಗಿ ದಿಶಾರಾಣಿ ಎಂಬ ಚೆಲುವೆ ತುಳು ಸಿನಿಮಾ ರಂಗಕ್ಕೆ ಪರಿಚಯವಾಗುತ್ತಿದ್ದಾಳೆ.
ಕ್ಯಾಮೆರಾ ಉದಯ್ ಬಳ್ಳಾಲ್, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ರಮೇಶ್ ರೈ ಕುಕ್ಕುವಳ್ಳಿ, ಸಂಗೀತ ಲಾಯ್ ವೆಲೆಂಟೈನ್ ಸಲ್ದಾನ, ಸಂಕಲನ ಶ್ರೀನಾಥ್ ಪವಾರ್, ಸಹನಿರ್ದೇಶನ ಅಕ್ಷತ್ ವಿಟ್ಲ, ಸಹಾಯಕ ನಿರ್ದೇಶನ ಸಜೇಶ್ ಪೂಜಾರಿ, ಚಿತ್ರಕಥೆ,ಸಂಭಾಷಣೆ ಸುರೇಶ್ ಬಲ್ಮಠ, ಪ್ರೊಡಕ್ಷನ್ ಮೆನೇಜರ್ ಕಾರ್ತಿಕ್ ಶೆಟ್ಟಿ..
ಹಾಡಿನ ಚಿತ್ರೀಕರಣ ಬಾಕಿ ಇದ್ದು, ಶೀಘ್ರದಲ್ಲಿ ಹಾಡಿನ ಚಿತ್ರೀಕರಣ ಮುಗಿಸಿ 2025ರಲ್ಲಿ ಚಿತ್ರ ತೆರೆಕಾಣಲಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…