ಸುರತ್ಕಲ್:ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ದಿನೇಶ್ ರವರನ್ನು ಲೋಕಾಯುಕ್ತ ಪೊಲೀಸರು ಹಣ ಸಮೇತ ರೆಡ್ ಹ್ಯಾಂಡಾಗಿ ಹಿಡಿದು ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ರವರ ಅಜ್ಜಿ ಪದ್ಮಾವತಿ ರವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ದೂರುದಾರರು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಿದ್ದರು
ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಕಡತವನ್ನು ಬಾಕಿ ಇರಿಸಿಕೊಂಡಿದ್ದರು
ಈ ಬಗ್ಗೆ ದೂರುದಾರರು ಡಿ 9 ರಂದು ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಛೇರಿಗೆ ಹೋಗಿ ವಿಚಾರಿಸಲಾಗಿ ಮುಲ್ಕಿ ಕಂದಾಯ ನಿರೀಕ್ಷಕರಾದ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ರೂ 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ
ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು
ಡಿಸೆಂಬರ್ 19 ಬೆಳಿಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ದೂರುದಾರರಿಂದ ರೂ. 4 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ
ಕೂಡಲೇ ಲೋಕಾಯುಕ್ತರು ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ,ನಟರಾಜ್ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಇವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…