ಮುಲ್ಕಿ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ ,ಭಾರತದ ಕ್ರೈಸ್ತ ಚರ್ಚುಗಳ ಒಕ್ಕೂಟ,ಭಾರತದ ಕಾನೂನು ನೆರವು ಘಟಕ, ಹಾಗೂ ವಿಜಯ ಮಾಸ್ಟರ್ ಟ್ರಸ್ಟ್ ಹಳೆಯಂಗಡಿ, ಸಹಯೋಗದಲ್ಲಿ ಅಂತರ್ ಕಾಲೇಜು ಹಾಗೂ ಚರ್ಚ್ ಗಳ ಕ್ರಿಸ್ಮಸ್ ಹಾಡುಗಳ ಸ್ಪರ್ಧೆ,ಕ್ರಿಸ್ಮಸ್ ಸೌಹಾರ್ದ ಕೂಟವು ಗುರುವಾರ ಬೆಳಿಗ್ಗೆ ಹಳೆಯಂಗಡಿ ಕುಬಲಗುಡ್ಡೆಯ ಇಂಡಿಯನ್ ಯೋಗ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ಕ್ರ್ಯೆಸ್ತ ಧರ್ಮ ಪ್ರಾಂತ್ಯದ ಬಿಷಪ್ ರೈಟ್ ರೆವೆ. ಡಾ. ಪೀಟರ್ ಪೌಲ್ ಸಾಲ್ದಾನ ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸಹೋದರತೆ ಸಹಬಾಳ್ವೆ ಮೂಲಕ ನೆಮ್ಮದಿಯ ಶಾಂತಿ ಲಭಿಸಲಿ ಎಂದರು
ಹಿರಿಯ ಸಿವಿಲ್ ನ್ಯಾಯಧೀಶೆ ಶೋಭಾ ಬಿ ಜಿ ಕಾನೂನು ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಭಾರತದ ಶ್ರೇಷ್ಠ ಸಂವಿಧಾನದ ಮೂಲ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಪರಾಧ ಮುಕ್ತ ಸಮಾಜ ಸಾದ್ಯ ಎಂದರು
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್ ವಿ ,ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ,ಪಕ್ಷಿಕೆರ ಚರ್ಚ್ನ ಧರ್ಮಗುರು ಅನಿಲ್ ಅಲ್ಪ್ರೆಡ್ ಡಿಸೋಜ, ಮುಲ್ಕಿ ಚರ್ಚ್ ನ ಧರ್ಮಗುರು ವಂ. ಆ್ಯಂಟನಿ ಶೇರಾ,ಸಿ ಎಸ್ ಐ ಕೆ ಎಸ್ ಡಿಯ ಬಿಷಪ್ ರೈಟ್ ರೆವೆ. ಹೇಮಚಂದ್ರ ಕುಮಾರ್ ಹಾಗೂ ಉದ್ಯಮಿ ರಾಹುಲ್ ಕರ್ಕಡ ಶಾಂತಿ ಜಾಥಾ ಉದ್ಘಾಟಿಸಿದರು
ಸಮಾರಂಭದ ಅಧ್ಯಕ್ಷತೆಯನ್ನು ಭಾರತದ ಕ್ರೈಸ್ತ ಚರ್ಚ್ ಗಳ ಒಕ್ಕೂಟದ ಅಧ್ಯಕ್ಷ ನೋಟರಿ ಡೇನಿಯಲ್ ದೇವರಾಜ್ ವಹಿಸಿದ್ದರು
ಧಾರ್ಮಿಕ ಚಿಂತಕ ಶ್ರೀಪತಿ ಭಟ್, ಶಿಮಂತೂರು,ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಕದಿಕೆ ಕೇಂದ್ರ ಜುಮ್ಮಾ ಮಸೀದಿಯ ಧರ್ಮಗುರು ಪಿ.ಎ ಅಬ್ದುಲ್ಲಾ ಝೈನಿ ಬಡಗನ್ನೂರು, ಹರೇಕಳ ರ ಉಲ್ಲಾಸ್ ನಗರ ಜುಮ್ಮಾ ಮಸೀದಿಯ ಧರ್ಮಗುರು ಶರೀಫ್ ಸಖಾಫಿ,
ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್
ನ್ಯಾಯಾಂಗ ಇಲಾಖೆಯ ಶಿರಸ್ತೇದಾರ್ ಪ್ರಕಾಶ್ ನಾಯಕ್ ,ವಕೀಲರುಗಳಾದ ಪ್ರತೀಕ್ಷಾ,ಜೀವನ್,ಶಶಿಕುಮಾರ್ , ಮುಲ್ಕಿ ಪೊಲೀಸ್ ಠಾಣೆಯಾಗಿ ಎಎಸ್ ಐ ಸುರೇಶ್, ಸಾಮಾಜಿಕ ಕಾರ್ಯಕರ್ತೆ ನಂದಾ ಪಾಯಸ್ ಮತ್ತಿತರರು ಉಪಸ್ಥಿತರಿದ್ದರು
ನ್ಯಾಯವಾದಿಗಳಾದ ಪ್ರಸಾದ್ ಶೆಟ್ಟಿ, ರವೀಶ್ ಕಾಮತ್, ಸುಭಾಷ್ ಚಂದ್ರ ಸಾಗರ್,ಶಿವರಾಜ್,ರಕ್ಷಿತ್ ಕಾನೂನು ಬಗ್ಗೆ ಮಾಹಿತಿ ನೀಡಿದರು
ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವ, ಉಚಿತ ಕ್ರ್ಯೆಸ್ತ ವಿವಾಹ ಪ್ರಮಾಣ ಪತ್ರ ನೊಂದಣಿ ಶಿಬಿರ ಹಾಗೂ ಒಕ್ಕೂಟದ ವತಿಯಿಂದ ಉಚಿತವಾಗಿ ವಿವಾಹ ನೊಂದಣಿ ಪ್ರಮಾಣ ಪತ್ರ ನೀಡಲಾಯಿತು
ಹರಿಣಿ ಸುಶಾಂತಿ ಬಂಗೇರ ಸ್ವಾಗತಿಸಿದರು ಪ್ರಸನ್ನಿ ಧನ್ಯವಾದ ಅರ್ಪಿಸಿದರು ಹರೀಶ್ ಕಾರ್ಯಕ್ರಮ ನಿರೂಪಿಸಿದರು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…