ಕರಾವಳಿ

ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ..!!

ಮಂಡ್ಯ, ಡಿಸೆಂಬರ್ 20: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

16 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

16 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

16 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

16 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

16 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

16 hours ago