ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು
ಸಚಿವರ ವಿರುದ್ಧ ಸಿ.ಟಿ.ರವಿ ಬಳಸಿದ ಪ್ರಕರಣ ನಡೆಯುತ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವ ಹಾಗೂ ಪರಿಷತ್ ನ ಕಾಂಗ್ರೆಸ್ ಸಭಾ ನಾಯಕ ಬೋಸರಾಜು, ಸಚಿವ ರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…