ಕರಾವಳಿ

“ಗ್ಯಾರಂಟಿ ಯೋಜನೆಯಲ್ಲಿ ಜಿಲ್ಲೆಗೆ 1464 ಕೋಟಿ 21 ಲಕ್ಷದ 94,500 ರೂ. ಬಂದಿದೆ“ -ಭರತ್ ಮುಂಡೋಡಿ

ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಆರು ತಿಂಗಳು ಕಳೆಯುವುದರೊಳಗೆ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುವ ಅವಕಾಶವನ್ನು ನನಗೆ ನೀಡಿದ್ದಾರೆ.

ನಮ್ಮ ರಾಜ್ಯದ ಬಜೆಟ್ ಗಾತ್ರ 3 ಲಕ್ಷದ 78 ಕೋಟಿ ರೂಪಾಯಿ. ಆದರೆ ವಾರ್ಷಿಕ 56000 ಕೋಟಿ ರೂಪಾಯಿ ಹಣವನ್ನು ನಮ್ಮ ಪಂಚ ಗ್ಯಾರಂಟಿ ಯೋಜನೆಗಳಿಗೆ ವ್ಯಯ ಮಾಡಬೇಕಿದೆ. ರಾಜ್ಯದ ಜನತೆಗೆ ನೀಡಿರುವ ಉಚಿತ ವಿದ್ಯುತ್ ಬಿಲ್ ಯೋಜನೆ, ವಿದ್ಯಾವಂತ ನಿರುದ್ಯೋಗಿ ಭತ್ಯೆ, ಶಕ್ತಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಯೋಜನೆ, ಅನ್ನ ಭಾಗ್ಯ ಯೋಜನೆಯಲ್ಲಿ 5 ಕೆಜಿ ಇದ್ದ ಅಕ್ಕಿಯನ್ನು 10 ಕೆಜಿಗೆ ಏರಿಕೆ, ಮಹಿಳೆಯರ ಖಾತೆಗೆ ನೇರವಾಗಿ ಜಮೆ ಮಾಡುವ ಗೃಹಲಕ್ಷ್ಮಿ ಯೋಜನೆ ಇದೆಲ್ಲ ನಮ್ಮ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ“ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದರು.

 


ವಿದ್ಯಾವಂತ ಫಲಾನುಭವಿಗಳಲ್ಲಿ 4240 ಅಭ್ಯರ್ಥಿಗಳು, ಗೃಹಲಕ್ಷ್ಮಿ ಯೋಜನೆಯಲ್ಲಿ 3,72,300 ಮಹಿಳೆಯರು, ಶಕ್ತಿ ಯೋಜನೆಯಲ್ಲಿ 6 ಕೋಟಿ 79 ಲಕ್ಷ ಮಹಿಳೆಯರು ಪ್ರಯಾಣ, ಅನ್ನ ಭಾಗ್ಯ ಯೋಜನೆಯಡಿಯಲ್ಲಿ 2,59,730 ಪಡಿತರ ಚೀಟಿ ಹೊಂದಿದವರ ಖಾತೆಗೆ 5.61 ಲಕ್ಷ ಅರ್ಹ ಫಲಾನುಭವಿಗಳಿದ್ದು 282.03 ಕೋಟಿ ವರ್ಗಾವಣೆ ಸೇರಿ ದಕ್ಷಿಣ ಕನ್ನಡ ಜಿಲ್ಲೆಗೆ 1464 ಕೋಟಿ 21 ಲಕ್ಷದ 94,500 ಹಣ ಬಂದಿದೆ.
ಸರಕಾರದಲ್ಲಿ ಹಣವಿಲ್ಲ ಅಭಿವೃದ್ಧಿ ಕಾರ್ಯ ನಿಂತಿದೆ ಎಂದು ಬಿಜೆಪಿ ಸಹಿತ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ, ಹಾಗಾದರೆ ಜಿಡಿಪಿಯಲ್ಲಿ ನಮ್ಮ ರಾಜ್ಯ ದೇಶದಲ್ಲೇ ಪ್ರಥಮ ಹೇಗೆ ಬಂದಿದೆ? ನಮ್ಮ ಯೋಜನೆಗಳಲ್ಲಿ ಯಾರಿಗೂ ಪರ್ಸಂಟೆಜ್ ಸಿಗುತ್ತಿಲ್ಲ, ನೇರವಾಗಿ ಅರ್ಹ ವ್ಯಕ್ತಿಗಳ ಖಾತೆಗೆ ಜಮೆ ಆಗುತ್ತಿರುವ ಕಾರಣ ಹಣ ಮಾಡಲು ಆಗುತ್ತಿಲ್ಲ ಇದೇ ಕಾರಣಕ್ಕೆ ಟೀಕೆ ಮಾಡುತ್ತಿದ್ದಾರೆ. ಈ ಯೋಜನೆಗಳಿಂದ ಯಾರೂ ದಿವಾಳಿಯಾಗುವುದಿಲ್ಲ“ ಎಂದು ಹೇಳಿದರು.
“ಮಂಗಳೂರು ಪತ್ರಕರ್ತರ ಸಂಘ ಶ್ಲಾಘನೀಯ ಕಾರ್ಯ ಮಾಡುತ್ತಿದೆ. ಇದರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಒಳ್ಳೆಯ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದೆ. ಮಡಪ್ಪಾಡಿಯಲ್ಲಿ ನಡೆದಿದ್ದ ಗ್ರಾಮ ವಾಸ್ತವ್ಯದಿಂದ ಊರಿಗೆ ಸುಸಜ್ಜಿತ ರಸ್ತೆ ಸಹಿತ ಅನೇಕ ಯೋಜನೆಗಳು ಜಾರಿಯಾಗಿವೆ. ಇದಕ್ಕಾಗಿ ಅಭಿನಂದನೆಗಳು“ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ ಬಿ.ಎನ್., ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

2 days ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

2 days ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

3 days ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

3 days ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

3 days ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

3 days ago