ಪುತ್ತೂರು: ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂವರು ಮಹಿಳಾ ಆರೋಪಿಗಳನ್ನು ಶನಿವಾರ ಬಂಧಿಸಿ, ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ರಾಜಾಜಿನಗರ ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಮತ್ತು ದ.ಕ.ಜಿಲ್ಲೆಯ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಬಂಧಿತ ಆರೋಪಿಗಳು.
ದ.12 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್ ಭಟ್ ಎಂಬವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…