ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ
ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆಬೆಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಳ ಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಶಿರ್ವಾದ ಪಡೆದರು.
ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…