ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಮುದುಗನೂರಿನ ತೋಟದಲ್ಲಿ ಬಚ್ಚಿಟ್ಟಿದ್ದ ತೇಗದ ತುಂಡೊಂದನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಹನಗೋಡು ಹೋಬಳಿಯ ಮುದಗನೂರಿನ ಗಿರೀಶ್ ಎಂಬುವವರ ತೋಟದಲ್ಲಿ ತೇಗದ ತುಂಡು ಪತ್ತೆಯಾಗಿದ್ದು, ಆತನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಎಸ್ ಟಿಪಿಎಫ್ ತಂಡ ಬುಧವಾರ ಸಂಜೆ ತೋಟದ ಮೇಲೆ ದಾಳಿ ನಡೆಸಿ ತೇಗದ ತುಂಡನ್ನು ಪತ್ತೆ ಹಚ್ಚಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಮಣ್ಣಿನಲ್ಲಿ ಒಂದು ಮೀ. ದಪ್ಪ ಹಾಗೂ 2.30.ಮೀ. ಉದ್ದದ ತೇಗದ ತುಂಡನ್ನು ಮಣ್ಣಿನಲ್ಲಿ ಹೂತು ತೆಂಗಿನ ಗರಿಗಳಿಂದ ಮುಚ್ಚಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪತ್ತೆಗೆ ಕ್ರಮವಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಮಾಹಿತಿ ದೊರೆತಿದ್ದು, ತನಿಖಾ ಹಂತದಲ್ಲಿದೆ. ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದೆಂದು ಆರ್ ಎಫ್.ಒ. ನಂದಕುಮಾರ್ ಮಾಹಿತಿ ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…