ಹನಗೋಡು: ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಜನರು ಚಾಚೂ ತಪ್ಪದೇ ಪಾಲಿಸಬೇಕು. ಇದರಿಂದ ಬಾರಿ ದಂಡ ಪಾವತಿ, ಹಾಗೂ ಅಮೂಲ್ಯವಾದ ಪ್ರಾಣ ಹಾನಿ ತಪ್ಪುತ್ತದೆ ಎಂದು ಪಿಎಸ್ಐ ರಾಮು ತಿಳಿಸಿದ್ದಾರೆ.
ಹನಗೋಡು ಮತ್ತು ಪಕ್ಕದ ಹಿಂಡಗುಡ್ಲುಗ್ರಾಮದಲ್ಲಿ ಸಂಚಾರಿ ನಿಯಮ ಪಾಲಿಸದೆ ಅಜಾಗರೂಕತೆ ಚಾಲನೆಯಿಂದ ಇತ್ತೀಚೆಗೆ ಎರಡು ಆಕ್ಸಿಡೆಂಟ್ ಗಳಾಗಿ ಇಬ್ಬರು ಮರಣ ಹೊಂದಿರುತ್ತಾರೆ. ಹುಣಸೂರು ಗ್ರಾಮಾಂತರ ಪೋಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ಕಾಯ್ದೆಗಳು ಜನ ಸಾಮಾನ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವುದು. ವಾಹನ ಚಾಲನೆ ಮಾಡುವಾಗ ಚಾಚೂ ತಪ್ಪದೆ ಹೆಲೈಟ್ ಹಾಗೂ ಸಂಚಾರಿ ನಿಯಮ ಪಾಲನೆ ಮಾಡಿದಲ್ಲಿ ಅಪಘಾತ ತಪ್ಪುವ ಜತೆಗೆ ದಂಡ ತೆರೆವುದು ಹಾಗೂ ಪ್ರಾಣ ಹಾನಿ ತಪ್ಪಿಸಬಹುದು. ನಿಯಮಗಳನ್ನು ಮೀರುತ್ತಿರುವುದು ಬಹುತೇಕ ಯುವಜನತೆ ವಿದ್ಯಾವಂತರೇ ಎನ್ನುತ್ತಿರುವುದು ನಿಜಕ್ಕೂ ವಿಷಾಧನೀಯ. ಈ ನಿಟ್ಟಿನಲ್ಲಿ ಇಲಾಖೆ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ
ಪಾಲಿಸಿ, ಹಾಗೂ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ , ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ನಿಷೇಧ ಇದ್ದರೂ ಪೋಷಕರು ಮಕ್ಕಳಿಗೆ ವಾಹನ ಕೊಡುವುದು ಇವೆಲ್ಲವೂ ಅನಾವುತಗಳಿಗೆ ಕಾರಣವಾಗುತ್ತವೆ ಹಾಗಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಎಎಸ್ಐ ಕೆ.ಬಿ.ಚಿನ್ನಸ್ವಾಮಿ ಇಮ್ರಾನ್ ಷರೀಫ್ ಮತ್ತು ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…