ಹನಗೋಡು: ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಜನರು ಚಾಚೂ ತಪ್ಪದೇ ಪಾಲಿಸಬೇಕು. ಇದರಿಂದ ಬಾರಿ ದಂಡ ಪಾವತಿ, ಹಾಗೂ ಅಮೂಲ್ಯವಾದ ಪ್ರಾಣ ಹಾನಿ ತಪ್ಪುತ್ತದೆ ಎಂದು ಪಿಎಸ್ಐ ರಾಮು ತಿಳಿಸಿದ್ದಾರೆ.
ಹನಗೋಡು ಮತ್ತು ಪಕ್ಕದ ಹಿಂಡಗುಡ್ಲುಗ್ರಾಮದಲ್ಲಿ ಸಂಚಾರಿ ನಿಯಮ ಪಾಲಿಸದೆ ಅಜಾಗರೂಕತೆ ಚಾಲನೆಯಿಂದ ಇತ್ತೀಚೆಗೆ ಎರಡು ಆಕ್ಸಿಡೆಂಟ್ ಗಳಾಗಿ ಇಬ್ಬರು ಮರಣ ಹೊಂದಿರುತ್ತಾರೆ. ಹುಣಸೂರು ಗ್ರಾಮಾಂತರ ಪೋಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ಕಾಯ್ದೆಗಳು ಜನ ಸಾಮಾನ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವುದು. ವಾಹನ ಚಾಲನೆ ಮಾಡುವಾಗ ಚಾಚೂ ತಪ್ಪದೆ ಹೆಲೈಟ್ ಹಾಗೂ ಸಂಚಾರಿ ನಿಯಮ ಪಾಲನೆ ಮಾಡಿದಲ್ಲಿ ಅಪಘಾತ ತಪ್ಪುವ ಜತೆಗೆ ದಂಡ ತೆರೆವುದು ಹಾಗೂ ಪ್ರಾಣ ಹಾನಿ ತಪ್ಪಿಸಬಹುದು. ನಿಯಮಗಳನ್ನು ಮೀರುತ್ತಿರುವುದು ಬಹುತೇಕ ಯುವಜನತೆ ವಿದ್ಯಾವಂತರೇ ಎನ್ನುತ್ತಿರುವುದು ನಿಜಕ್ಕೂ ವಿಷಾಧನೀಯ. ಈ ನಿಟ್ಟಿನಲ್ಲಿ ಇಲಾಖೆ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ
ಪಾಲಿಸಿ, ಹಾಗೂ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ , ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ನಿಷೇಧ ಇದ್ದರೂ ಪೋಷಕರು ಮಕ್ಕಳಿಗೆ ವಾಹನ ಕೊಡುವುದು ಇವೆಲ್ಲವೂ ಅನಾವುತಗಳಿಗೆ ಕಾರಣವಾಗುತ್ತವೆ ಹಾಗಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಎಎಸ್ಐ ಕೆ.ಬಿ.ಚಿನ್ನಸ್ವಾಮಿ ಇಮ್ರಾನ್ ಷರೀಫ್ ಮತ್ತು ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…