ಹನಗೋಡು: ಸಂಚಾರಿ ನಿಯಮಗಳ ಬಗ್ಗೆ ಜನರಿಗೆ ಜಾಗೃತಿ ಸುರಕ್ಷತೆ ದೃಷ್ಟಿಯಿಂದ ಸಂಚಾರಿ ನಿಯಮಗಳನ್ನು ಜನರು ಚಾಚೂ ತಪ್ಪದೇ ಪಾಲಿಸಬೇಕು. ಇದರಿಂದ ಬಾರಿ ದಂಡ ಪಾವತಿ, ಹಾಗೂ ಅಮೂಲ್ಯವಾದ ಪ್ರಾಣ ಹಾನಿ ತಪ್ಪುತ್ತದೆ ಎಂದು ಪಿಎಸ್ಐ ರಾಮು ತಿಳಿಸಿದ್ದಾರೆ.
ಹನಗೋಡು ಮತ್ತು ಪಕ್ಕದ ಹಿಂಡಗುಡ್ಲುಗ್ರಾಮದಲ್ಲಿ ಸಂಚಾರಿ ನಿಯಮ ಪಾಲಿಸದೆ ಅಜಾಗರೂಕತೆ ಚಾಲನೆಯಿಂದ ಇತ್ತೀಚೆಗೆ ಎರಡು ಆಕ್ಸಿಡೆಂಟ್ ಗಳಾಗಿ ಇಬ್ಬರು ಮರಣ ಹೊಂದಿರುತ್ತಾರೆ. ಹುಣಸೂರು ಗ್ರಾಮಾಂತರ ಪೋಲೀಸ್ ಇಲಾಖೆಯಿಂದ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ಕಾಯ್ದೆಗಳು ಜನ ಸಾಮಾನ್ಯರ ಹಿತದೃಷ್ಟಿಯಿಂದ ಜಾರಿಗೆ ತಂದಿರುವುದು. ವಾಹನ ಚಾಲನೆ ಮಾಡುವಾಗ ಚಾಚೂ ತಪ್ಪದೆ ಹೆಲೈಟ್ ಹಾಗೂ ಸಂಚಾರಿ ನಿಯಮ ಪಾಲನೆ ಮಾಡಿದಲ್ಲಿ ಅಪಘಾತ ತಪ್ಪುವ ಜತೆಗೆ ದಂಡ ತೆರೆವುದು ಹಾಗೂ ಪ್ರಾಣ ಹಾನಿ ತಪ್ಪಿಸಬಹುದು. ನಿಯಮಗಳನ್ನು ಮೀರುತ್ತಿರುವುದು ಬಹುತೇಕ ಯುವಜನತೆ ವಿದ್ಯಾವಂತರೇ ಎನ್ನುತ್ತಿರುವುದು ನಿಜಕ್ಕೂ ವಿಷಾಧನೀಯ. ಈ ನಿಟ್ಟಿನಲ್ಲಿ ಇಲಾಖೆ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ
ಪಾಲಿಸಿ, ಹಾಗೂ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್, ಮದ್ಯಪಾನ ಮಾಡಿ ಚಾಲನೆ, ಸೀಟ್ ಬೆಲ್ಟ್ ಧರಿಸದಿರುವುದು, ಸೈಡ್ ಮಿರರ್ ಇಲ್ಲದ ವಾಹನ , ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ನಿಷೇಧ ಇದ್ದರೂ ಪೋಷಕರು ಮಕ್ಕಳಿಗೆ ವಾಹನ ಕೊಡುವುದು ಇವೆಲ್ಲವೂ ಅನಾವುತಗಳಿಗೆ ಕಾರಣವಾಗುತ್ತವೆ ಹಾಗಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಎಎಸ್ಐ ಕೆ.ಬಿ.ಚಿನ್ನಸ್ವಾಮಿ ಇಮ್ರಾನ್ ಷರೀಫ್ ಮತ್ತು ಆಟೋ ಚಾಲಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…