ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲಿ ಕಟ್ಟೆಯಲ್ಲಿ ೫ ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ ಹೆಸರಿನಲ್ಲಿ ಜಾಗವಿದ್ದರೂ ನಮಗೆ ಮನೆ ಕಟ್ಟುವಂತಿಲ್ಲ, ನನ್ನ ಪತಿ ಇದೇ ಕಾರಣಕ್ಕೆ ಈ ಹಿಂದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನನ್ನ ಜಾಗದಲ್ಲಿ ಮನೆ ಕಟ್ಟಲು ಅವಕಾಶ ಮಾಡಿಕೊಡುವಂತೆ ಶಾಸಕರಿಗೆ ಮಹಿಳೆ ಮನವಿ ಸಲ್ಲಿಸಿದ್ದಾರೆ.
ಪರಿಶೀಲನೆ ಮಾಡಿ ತಹಶಿಲ್ದಾರ್ಗೆ ಸೂಚನೆ
ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ತಕ್ಷಣವೇ ತಹಶಿಲ್ದಾರ್ಗೆ ಕರೆ ಮಾಡಿ ಮಹಿಳೆಯ ದೂರನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕೂಡಲೇ ಸ್ಥಳದಲ್ಲಿ ಸರ್ವೆ ನಡೆಸಿ ಮಹಿಳೆ ಹೆಸರಿನಲ್ಲಿ ಜಾಗ ಮಂಜೂರಾಗಿದ್ದರೆ ಅದನ್ನು ಕೊಡುಸುವಂತೆ ಸೂಚನೆ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…