ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲಿ ಕಟ್ಟೆಯಲ್ಲಿ ೫ ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ ಹೆಸರಿನಲ್ಲಿ ಜಾಗವಿದ್ದರೂ ನಮಗೆ ಮನೆ ಕಟ್ಟುವಂತಿಲ್ಲ, ನನ್ನ ಪತಿ ಇದೇ ಕಾರಣಕ್ಕೆ ಈ ಹಿಂದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ನನ್ನ ಜಾಗದಲ್ಲಿ ಮನೆ ಕಟ್ಟಲು ಅವಕಾಶ ಮಾಡಿಕೊಡುವಂತೆ ಶಾಸಕರಿಗೆ ಮಹಿಳೆ ಮನವಿ ಸಲ್ಲಿಸಿದ್ದಾರೆ.
ಪರಿಶೀಲನೆ ಮಾಡಿ ತಹಶಿಲ್ದಾರ್ಗೆ ಸೂಚನೆ
ಮಹಿಳೆಯ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ತಕ್ಷಣವೇ ತಹಶಿಲ್ದಾರ್ಗೆ ಕರೆ ಮಾಡಿ ಮಹಿಳೆಯ ದೂರನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಕೂಡಲೇ ಸ್ಥಳದಲ್ಲಿ ಸರ್ವೆ ನಡೆಸಿ ಮಹಿಳೆ ಹೆಸರಿನಲ್ಲಿ ಜಾಗ ಮಂಜೂರಾಗಿದ್ದರೆ ಅದನ್ನು ಕೊಡುಸುವಂತೆ ಸೂಚನೆ ನೀಡಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…