ಕರಾವಳಿ

ಕಿನ್ನಿಗೋಳಿಯಲ್ಲಿ ಮೇಳೈಸಿದ ರಾಜ್ಯಮಟ್ಟದ ಮಕ್ಕಳ ಹಬ್ಬ….

ದಕ್ಷಿಣ ಕನ್ನಡ : ಪ್ರತಿಷ್ಠಿತ ಯುಗಪುರುಷ ಕಿನ್ನಿಗೋಳಿ ಮತ್ತು ವಾಯ್ಸ್ ಆಫ್ ಆರಾಧನಾ ಸಹಯೋಗದೊಂದಿಗೆ ರಾಜ್ಯಮಟ್ಟದ ಮಕ್ಕಳ ಹಬ್ಬ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಭುವನಾಭಿರಾಮ ಉಡುಪ ಇವರ ಮಾರ್ಗದರ್ಶನದಲ್ಲಿ, ಪದ್ಮಶ್ರೀ ಭಟ್ ನಿಡೋಡಿ ಇವರ ನೇತೃತ್ವದಲ್ಲಿ ಅದ್ದೂರಿಯಾಗಿ, ಯಶಸ್ವಿಯಾಗಿ ಸಂಪನ್ನಗೊಂಡಿತು.

ರಾಜ್ಯಮಟ್ಟದ ಮಕ್ಕಳ ಹಬ್ಬ ವಿದ್ಯಾರ್ಥಿ ಆಶ್ರಿತ್ ಕಶ್ಯಪ್ ಇವರ ಪ್ರಾರ್ಥನೆಯೊಂದಿಗೆ ಆರಂಭವಾಗಿ, ಸಮ್ಮೇಳನದ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಎಂ.ಜಿ. ಸುಳ್ಯ ವಹಿಸಿದ್ದು ಉದ್ಘಾಟನೆಯನ್ನು ವಿದ್ಯಾರ್ಥಿ ಕೇಶವ ಭಟ್ ನೆರವೇರಿಸಿದರು, ಸ್ವಾಗತ ಮತ್ತು ಪ್ರಸ್ತಾವನೆಯನ್ನು ಹಿರಿಯರಾದ ಭುವನಾಭಿರಾಮ ಉಡುಪ ನೆರವೇರಿಸಿದರು. ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಧರ್ಮದರ್ಶಿ, ಡಾ. ಹರಿಕೃಷ್ಣ ಪುನರೂರು ಶುಭ ಹಾರೈಸಿದರು. ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಗರಿ ರಾಘವೇಂದ್ರ ರಾವ್, ಮೋಹನದಾಸ ಸುರತ್ಕಲ್, ಅಜಿತ್ ಕೆರೆಕಾಡು, ಪದ್ಮಶ್ರೀ ಭಟ್ ನಿಡ್ಡೋಡಿ, ಆಗಮಿಸಿದ್ದರು,

ಯುಗಪುರುಷ ಪ್ರಧಾನ ಸಂಪಾದಕರಾದ ಭುವನಾಭಿರಾಮ ಉಡುಪ ಮಾತನಾಡಿ- ಯುಗಪುರುಷ ಸಂಸ್ಥೆ 78 ವರ್ಷ ಪೂರೈಸಿದ್ದು, ಕರ್ನಾಟಕದಲ್ಲಿ ಅತಿ ಸುಧೀರ್ಘಕಾಲ ಪತ್ರಿಕೆ ಮತ್ತು ಸಾಮಾಜಿಕ ಕಳಕಳಿಯನ್ನು ಹೊಂದಿದ, ಸಮಾಜಮುಖಿ ಕೆಲಸವನ್ನ ನಿರ್ವಹಿಸುತ್ತಾ ಬಂದದ್ದು ಮುಂದುವರಿಸುವುದಾಗಿ ತಿಳಿಸಿದರು, ರಾಜ್ಯಮಟ್ಟದ ಮಕ್ಕಳ ಹಬ್ಬಕ್ಕೆ ಶುಭ ಹಾರೈಸಿದರು.ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಪದ್ಮಶ್ರೀ ಭಟ್ ಮಾತನಾಡಿ, ಸಮಾಜದ ಬಹಳ ಜನರ ಸಹಕಾರದಿಂದ, ನಿರಂತರವಾಗಿ ಮಕ್ಕಳಿಗೆ ವೇದಿಕೆಯನ್ನ ಕಲ್ಪಿಸುತ್ತಾ ಬಂದಿದ್ದು, ತಮ್ಮ ಸಂಸ್ಥೆಯಿಂದ ಗುರುತಿಸಿದ ಹಲವು ಮಕ್ಕಳು ಇಂದು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದು ಸಂತೋಷ ತಂದಿದೆ ಎಂದರು, ಇಂದಿನ ರಾಜ್ಯಮಟ್ಟದ ಮಕ್ಕಳ ಹಬ್ಬಕ್ಕೆ ಕರ್ನಾಟಕ ರಾಜ್ಯದ ಹಲವು ಪ್ರದೇಶಗಳಿಂದ ಪ್ರತಿಭೆಗಳು ಆಗಮಿಸಿದ್ದು ಅವರೆಲ್ಲರಿಗೂ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಆಶ್ರಿತ್ ಕಶ್ಯಪ್ ಬರೆದ ಪುಸ್ತಕವನ್ನು ಪತ್ರಕರ್ತ ಮಂದಾರ ರಾಜೇಶ್ ಭಟ್ ಹಾಗೂ ಶಿಕ್ಷಕರಾದ ರಾಮಕೃಷ್ಣ ಶಿರೂರು ಬಿಡುಗಡೆಗೊಳಿಸಿ ಅಭಿನಂದಿಸಿದರು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಗುರುಪ್ರಸಾದ್ ಭಟ್ ಹಾಗೂ ವಂದನಾರ್ಪಣೆಯನ್ನು ಸತೀಶ್ ಅಬನಡ್ಕ ನೆರವೇರಿಸಿದರು.ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಕ್ಕಳ ಕವಿಗೋಷ್ಠಿ, ನೃತ್ಯ, ಸಂಗೀತ, ಹಾಡು, ತಬಲವಾದನ, ಕಥೆ, ಕವಿತೆ, ಲಘು ಸಂಗೀತ, ಭಕ್ತಿಗೀತೆ ಸೇರಿದಂತೆ ಹಲವು ಪ್ರತಿಭೆಗಳು ಅನಾವರಣಗೊಂಡವು, ಸುಮಾರು ನೂರಕ್ಕೂ ಹೆಚ್ಚು ಪ್ರತಿಭೆಗಳು ಭಾಗವಹಿಸಿದ್ದು ಅವರೆಲ್ಲರಿಗೂ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಾಯಂಕಾಲದ ಲಘು ಉಪಹಾರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮಂದಾರ ರಾಜೇಶ್ ಭಟ್, ದಿನ್ ರಾಜ್ ಕೆ, ಅರುಣ್ ಅಜೇಕಾರ್, ಬಸವರಾಜ ಮಂತ್ರಿ, ಸತೀಶ್ ಅಬನಡ್ಕ, ಮಲ್ಲಿಕಾ, ಅಭಿಷೇಕ್ ಶೆಟ್ಟಿ ಐಕಳ, ಪ್ರಮೀಳಾ ಶೆಟ್ಟಿ, ವಿನಯ್ ಎಂ ಎಸ್, ಭವ್ಯ ವಿನಯ್ ಸಹಕಾರ ನೀಡಿದರು
ಕಾರ್ಯಕ್ರಮದ ನೇರ ಪ್ರಸಾರವನ್ನು ತುಳುನಾಡು ವಾರ್ತೆ ಹಾಗೂ ರೇಡಿಯೋ ಸಾರಂಗ್ ನೆರವೇರಿಸಿದರು, ಸ್ಥಳೀಯ ಪತ್ರಕರ್ತರು ಮತ್ತು ಮಾಧ್ಯಮ ನಿರೂಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ವರದಿ : ಮಂದಾರ ರಾಜೇಶ್ ಭಟ್

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

9 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

9 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

9 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

15 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

15 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago