ಬಂಟ್ವಾಳ: ಬಿ.ಸಿ.ರೋಡಿನ ಆಡಳಿತ ಸೌಧದ ಕಚೇರಿ ಪುಲ್ ರಶ್..ಜನವೋ ಜನ.. ಕಚೇರಿಯ ಒಳಗೆ ಕಾಲಿಡಲು ಅಸಾಧ್ಯ ಎಂಬಂತೆ ಜನಜಂಗುಲಿ..ಕಚೇರಿಯ ನಾಲ್ಲು ಸುತ್ತಲೂ ಜನ ಸಂದಣಿ, ಸರತಿ ಸಾಲುಗಳು. ಇದೇನಪ್ಪಾ ಅಂತ ಕೇಳಿದರೆ, ರೇಷನ್ ಕಾರ್ಡ್ ವಿತರಣೆ ನಡೆಸುವ ಕಾರ್ಯ ನಡೆಯುತ್ತಿರುವುದು ಎಂಬ ಉತ್ತರ ಅಧಿಕಾರಿಗಳಿಂದ ಬಂತು.
ತಿದ್ದುಪಡಿ, ಹೆಸರು ಸೇರ್ಪಡೆ, ರದ್ದು ಮತ್ತು ವಾಸ್ತವ್ಯದ ಬದಲಾವಣೆಗಾಗಿ ಸರಕಾರ ಅವಕಾಶ ನೀಡಿ , ಖಾಸಗಿ ಗ್ರಾಮ ಒನ್ ಗಳಲ್ಲಿ ಅರ್ಜಿಯನ್ನು ಸ್ವೀಕರಿಸಿಲು ಅವಕಾಶ ನೀಡಿತ್ತು. ಹೀಗೆ ನೀಡಿದ ಅರ್ಜಿಯನ್ನು ಮತ್ತು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತಿದೆ. ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಇಂದು ರೇಷನ್ ಕಾರ್ಡ್ ವಿತರಣೆಯಾಗುತ್ತಿದ್ದು, ಸುಮಾರು ಮುನ್ನೂರು ಜನ ಕಾರ್ಡ್ ಪಡೆಯುವ ಉದ್ದೇಶದಿಂದ ಕಚೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹಾಗಾಗಿ ಬೆಳಿಗ್ಗಯಿಂದಲೇ ಕಂದಾಯ ಇಲಾಖೆಯ ಆವರಣದಲ್ಲಿ ಜನಸಂದಣಿಯಿತ್ತು.
ಸಮಸ್ಯೆಯಾಗದಂತೆ ವಿತರಣೆ: ಅಹಾರ ಶಾಖೆ ಅಧಿಕಾರಿ ರವಿ
ಸುಮಾರು 300 ಜನರಿಗೆ ರೇಷನ್ ಕಾರ್ಡ್ ಪಡೆಯಲು ಕಚೇರಿಗೆ ಬರುವಂತೆ ಟೋಕನ್ ನೀಡಿದ್ದು, ಶುಕ್ರವಾರ ,ಶನಿವಾರ ರಜೆಯಾದ ಕಾರಣ ಎಲ್ಲರೂ ಇಂದು ಬಂದಿದ್ದಾರೆ. ಮಧ್ಯಾಹ್ನ ವೇಳೆ 150 ಕ್ಕೂ ಅಧಿಕ ಮಂದಿಗೆ ಕಾರ್ಡ್ ನೀಡಲಾಗಿದೆ.ಸಂಜೆ 4 ಗಂಟೆಯೊಳಗೆ ಯಾವುದೇ ಸಮಸ್ಯೆಯಾಗದಂತೆ ನಿಢುವ ವ್ಯವಸ್ಥೆ ಮಾಡಲಾಗುತ್ತದೆ.
ತಿಂಗಳುಗಳ ಕಾಲ ಅವಕಾಶ ನೀಡಿ: ತುಂಗಪ್ಪ ಬಂಗೇರ
ತಿದ್ದುಪಡಿ, ಹೆಸರು ಸೇರ್ಪಡೆ ಗಾಗಿ ಇನ್ನು ಒಂದು ತಿಂಗಳ ಕಾಲ ಅವಕಾಶ ನೀಡುವಂತೆ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಒತ್ತಾಯ ಮಾಡಿದ್ದಾರೆ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…