ಬಂಟ್ವಾಳ: ಬಿ.ಸಿ.ರೋಡಿನ ಆಡಳಿತ ಸೌಧದ ಕಚೇರಿ ಪುಲ್ ರಶ್..ಜನವೋ ಜನ.. ಕಚೇರಿಯ ಒಳಗೆ ಕಾಲಿಡಲು ಅಸಾಧ್ಯ ಎಂಬಂತೆ ಜನಜಂಗುಲಿ..ಕಚೇರಿಯ ನಾಲ್ಲು ಸುತ್ತಲೂ ಜನ ಸಂದಣಿ, ಸರತಿ ಸಾಲುಗಳು. ಇದೇನಪ್ಪಾ ಅಂತ ಕೇಳಿದರೆ, ರೇಷನ್ ಕಾರ್ಡ್ ವಿತರಣೆ ನಡೆಸುವ ಕಾರ್ಯ ನಡೆಯುತ್ತಿರುವುದು ಎಂಬ ಉತ್ತರ ಅಧಿಕಾರಿಗಳಿಂದ ಬಂತು.
ತಿದ್ದುಪಡಿ, ಹೆಸರು ಸೇರ್ಪಡೆ, ರದ್ದು ಮತ್ತು ವಾಸ್ತವ್ಯದ ಬದಲಾವಣೆಗಾಗಿ ಸರಕಾರ ಅವಕಾಶ ನೀಡಿ , ಖಾಸಗಿ ಗ್ರಾಮ ಒನ್ ಗಳಲ್ಲಿ ಅರ್ಜಿಯನ್ನು ಸ್ವೀಕರಿಸಿಲು ಅವಕಾಶ ನೀಡಿತ್ತು. ಹೀಗೆ ನೀಡಿದ ಅರ್ಜಿಯನ್ನು ಮತ್ತು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತಿದೆ. ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಇಂದು ರೇಷನ್ ಕಾರ್ಡ್ ವಿತರಣೆಯಾಗುತ್ತಿದ್ದು, ಸುಮಾರು ಮುನ್ನೂರು ಜನ ಕಾರ್ಡ್ ಪಡೆಯುವ ಉದ್ದೇಶದಿಂದ ಕಚೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹಾಗಾಗಿ ಬೆಳಿಗ್ಗಯಿಂದಲೇ ಕಂದಾಯ ಇಲಾಖೆಯ ಆವರಣದಲ್ಲಿ ಜನಸಂದಣಿಯಿತ್ತು.
ಸಮಸ್ಯೆಯಾಗದಂತೆ ವಿತರಣೆ: ಅಹಾರ ಶಾಖೆ ಅಧಿಕಾರಿ ರವಿ
ಸುಮಾರು 300 ಜನರಿಗೆ ರೇಷನ್ ಕಾರ್ಡ್ ಪಡೆಯಲು ಕಚೇರಿಗೆ ಬರುವಂತೆ ಟೋಕನ್ ನೀಡಿದ್ದು, ಶುಕ್ರವಾರ ,ಶನಿವಾರ ರಜೆಯಾದ ಕಾರಣ ಎಲ್ಲರೂ ಇಂದು ಬಂದಿದ್ದಾರೆ. ಮಧ್ಯಾಹ್ನ ವೇಳೆ 150 ಕ್ಕೂ ಅಧಿಕ ಮಂದಿಗೆ ಕಾರ್ಡ್ ನೀಡಲಾಗಿದೆ.ಸಂಜೆ 4 ಗಂಟೆಯೊಳಗೆ ಯಾವುದೇ ಸಮಸ್ಯೆಯಾಗದಂತೆ ನಿಢುವ ವ್ಯವಸ್ಥೆ ಮಾಡಲಾಗುತ್ತದೆ.
ತಿಂಗಳುಗಳ ಕಾಲ ಅವಕಾಶ ನೀಡಿ: ತುಂಗಪ್ಪ ಬಂಗೇರ
ತಿದ್ದುಪಡಿ, ಹೆಸರು ಸೇರ್ಪಡೆ ಗಾಗಿ ಇನ್ನು ಒಂದು ತಿಂಗಳ ಕಾಲ ಅವಕಾಶ ನೀಡುವಂತೆ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಒತ್ತಾಯ ಮಾಡಿದ್ದಾರೆ
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…