ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀಕೃಷ್ಣ ಮಠಕ್ಕೆ ಚಿತ್ರನಟ, ನಿರ್ದೇಶಕ ಉಪೇಂದ್ರ ಭೇಟಿ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು.
ಮನುಷ್ಯ ನಾನು ಅಂತ ಬಂದಾಗ ತುಂಬಾ ಸಫರ್ ಆಗುತ್ತಾನೆ. ನೀನು ಎಂದಾಗ ತುಂಬಾ ಹಗುರ ಆಗುತ್ತಾನೆ. ಇದರಲ್ಲೇ ಎಲ್ಲಾ ವಿಷಯಗಳು ಅಡಗಿವೆ. ನಮ್ಮೆಲ್ಲರನ್ನು ಒಂದು ಶಕ್ತಿ ತೆಗೆದುಕೊಂಡು ಹೋಗುತ್ತಿದೆ ಎಂಬ ಸತ್ಯದ ಅರಿವಾಗಿದೆ. ನಾನು ಏನು ಮಾಡುತ್ತಿಲ್ಲ ಅನ್ನುವುದು ನನಗೆ ಖಂಡಿತ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಸದ್ಯದಲ್ಲೇ ಅವರು ಬೆಂಗಳೂರಿಗೆ ಬರುತ್ತಾರೆ. ಆಗ ನಾನು ಅವರನ್ನು ಭೇಟಿಯಾಗುತ್ತೇನೆ. ಶಿವರಾಜ್ ಕುಮಾರ್ ಇನ್ನೂ ನೂರಾರು ಚಿತ್ರಗಳನ್ನು ಮಾಡಬೇಕು. ಅವರ ಜೊತೆ ನಾನು ಕೂಡ ಚಿತ್ರ ಮಾಡಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!