ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು.
ಮನುಷ್ಯ ನಾನು ಅಂತ ಬಂದಾಗ ತುಂಬಾ ಸಫರ್ ಆಗುತ್ತಾನೆ. ನೀನು ಎಂದಾಗ ತುಂಬಾ ಹಗುರ ಆಗುತ್ತಾನೆ. ಇದರಲ್ಲೇ ಎಲ್ಲಾ ವಿಷಯಗಳು ಅಡಗಿವೆ. ನಮ್ಮೆಲ್ಲರನ್ನು ಒಂದು ಶಕ್ತಿ ತೆಗೆದುಕೊಂಡು ಹೋಗುತ್ತಿದೆ ಎಂಬ ಸತ್ಯದ ಅರಿವಾಗಿದೆ. ನಾನು ಏನು ಮಾಡುತ್ತಿಲ್ಲ ಅನ್ನುವುದು ನನಗೆ ಖಂಡಿತ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಸದ್ಯದಲ್ಲೇ ಅವರು ಬೆಂಗಳೂರಿಗೆ ಬರುತ್ತಾರೆ. ಆಗ ನಾನು ಅವರನ್ನು ಭೇಟಿಯಾಗುತ್ತೇನೆ. ಶಿವರಾಜ್ ಕುಮಾರ್ ಇನ್ನೂ ನೂರಾರು ಚಿತ್ರಗಳನ್ನು ಮಾಡಬೇಕು. ಅವರ ಜೊತೆ ನಾನು ಕೂಡ ಚಿತ್ರ ಮಾಡಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…