ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು.
ಮನುಷ್ಯ ನಾನು ಅಂತ ಬಂದಾಗ ತುಂಬಾ ಸಫರ್ ಆಗುತ್ತಾನೆ. ನೀನು ಎಂದಾಗ ತುಂಬಾ ಹಗುರ ಆಗುತ್ತಾನೆ. ಇದರಲ್ಲೇ ಎಲ್ಲಾ ವಿಷಯಗಳು ಅಡಗಿವೆ. ನಮ್ಮೆಲ್ಲರನ್ನು ಒಂದು ಶಕ್ತಿ ತೆಗೆದುಕೊಂಡು ಹೋಗುತ್ತಿದೆ ಎಂಬ ಸತ್ಯದ ಅರಿವಾಗಿದೆ. ನಾನು ಏನು ಮಾಡುತ್ತಿಲ್ಲ ಅನ್ನುವುದು ನನಗೆ ಖಂಡಿತ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಸದ್ಯದಲ್ಲೇ ಅವರು ಬೆಂಗಳೂರಿಗೆ ಬರುತ್ತಾರೆ. ಆಗ ನಾನು ಅವರನ್ನು ಭೇಟಿಯಾಗುತ್ತೇನೆ. ಶಿವರಾಜ್ ಕುಮಾರ್ ಇನ್ನೂ ನೂರಾರು ಚಿತ್ರಗಳನ್ನು ಮಾಡಬೇಕು. ಅವರ ಜೊತೆ ನಾನು ಕೂಡ ಚಿತ್ರ ಮಾಡಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…