ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ ಯು ಐ ಸಿನಿಮಾ ತುಂಬಾ ಚೆನ್ನಾಗಿ ಹೋಗುತ್ತಿದೆ. ರಜನಿಕಾಂತ್ ಜೊತೆ ನಟಿಸಿರುವ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಇನ್ನೊಂದು ಶೆಡ್ಯೂಲ್ ಇದೆ. ಫೆಬ್ರವರಿ ಮಾರ್ಚ್ ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆ ಆಗಬಹುದು ಎಂದರು.
ಮನುಷ್ಯ ನಾನು ಅಂತ ಬಂದಾಗ ತುಂಬಾ ಸಫರ್ ಆಗುತ್ತಾನೆ. ನೀನು ಎಂದಾಗ ತುಂಬಾ ಹಗುರ ಆಗುತ್ತಾನೆ. ಇದರಲ್ಲೇ ಎಲ್ಲಾ ವಿಷಯಗಳು ಅಡಗಿವೆ. ನಮ್ಮೆಲ್ಲರನ್ನು ಒಂದು ಶಕ್ತಿ ತೆಗೆದುಕೊಂಡು ಹೋಗುತ್ತಿದೆ ಎಂಬ ಸತ್ಯದ ಅರಿವಾಗಿದೆ. ನಾನು ಏನು ಮಾಡುತ್ತಿಲ್ಲ ಅನ್ನುವುದು ನನಗೆ ಖಂಡಿತ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆಗಿದೆ. ಸದ್ಯದಲ್ಲೇ ಅವರು ಬೆಂಗಳೂರಿಗೆ ಬರುತ್ತಾರೆ. ಆಗ ನಾನು ಅವರನ್ನು ಭೇಟಿಯಾಗುತ್ತೇನೆ. ಶಿವರಾಜ್ ಕುಮಾರ್ ಇನ್ನೂ ನೂರಾರು ಚಿತ್ರಗಳನ್ನು ಮಾಡಬೇಕು. ಅವರ ಜೊತೆ ನಾನು ಕೂಡ ಚಿತ್ರ ಮಾಡಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…