ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.
ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…