ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.
ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…