ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.
ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…