ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಸರಕಾರಿ ಜೂನಿಯರ್ ಕಾಲೇಜಿಗೆ ಹೋಗುವ ರಸ್ತೆ ಕ್ರಾಸ್ ಬಳಿ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಒಳಚರಂಡಿಯಲ್ಲಿ ಹರಿದು ಹೋಗದೆ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು ರೋಗಗಳ ಭೀತಿ ಎದುರಾಗಿದೆ.
ಬಹು ಮಹಡಿ ಕಟ್ಟಡದ ಮಾಲಕರು ಕಟ್ಟಡದ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಬಿಡುತ್ತಿದ್ದಾರೆ.ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದರೂ ಸೂಕ್ತ ಚರಂಡಿ ವ್ಯವಸ್ಥೆ, ಸರಿಪಡಿಸಿಲ್ಲ ಹಾಗೂ ತೆರೆದ ಸಾರ್ವಜನಿಕ ಚರಂಡಿಗೆ ಕಟ್ಟಡದ ತ್ಯಾಜ್ಯ ನೀರು ಬಿಡುವ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲು ನಗರ ಪಂಚಾಯತ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದೇ ಪರಿಸರದಲ್ಲಿ ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದು ಕೂಡಲೇ ಮುಲ್ಕಿ ನಗರ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತು ಒಳಚರಂಡಿ ವ್ಯವಸ್ಥೆ, ಸರಿಪಡಿಸುವುದೇ ಅಲ್ಲದೆ ತ್ಯಾಜ್ಯ ನೀರನ್ನು ಸಾರ್ವಜನಿಕ ಚರಂಡಿಗೆ ಹರಿಯ ಬಿಡುತ್ತಿರುವ ಬಹು ಮಹಡಿ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…