ಹನಗೋಡು ಹೋಬಳಿಯ ಚಿಲ್ಕುಂದ ಗ್ರಾಮ ಪಂಚಾಯ್ತಿ ವರಿಷ್ಟರ ಗಾದಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಗದೀಶ್ (ಸಾಮಾನ್ಯ) ಅವಿರೋಧವಾಗಿ ಆಯ್ಕೆಯಾದರು.
ಆಂತರಿಕ ಒಪ್ಪಂದಂತೆ ಹಿಂದಿನ ಅಧ್ಯಕ್ಷ ಸತೀಶ್ ರಾಜಿನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.
ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 16 ಸದಸ್ಯರಿದ್ದು, ಹಬ್ಬನಕುಪ್ಪೆ ಕ್ಷೇತ್ರದ ಜಗದೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಲೋಕೋಪಯೋಗಿ ಇಲಾಖೆಯ ಎಇಇ ನಿಶಾಂತ್ ರವರು ಜಗದೀಶ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಪಟಾಕಿ ಸಿಡಿಸಿ ಸಂಭ್ರಮ:
ಗ್ರಾ.ಪಂ. ವರಿಷ್ಟರ ಆಯ್ಕೆ ಪ್ರಕಟಿಸುತ್ತಿದ್ದಂತೆ ಗ್ರಾ.ಪಂ.ಹೊರಗಡೆ ಜಮಾಯಿಸಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ನಡೆಸಿದರು.
ಅಭಿನಂದನೆ : ನೂತನ ಗ್ರಾ.ಪಂ.ವರಿಷ್ಟರನ್ನ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರೇಮಕುಮಾರ್, ಮಾತನಾಡಿ ನೂತನ ಅಧ್ಯಕ್ಷರು ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಬೀದಿ ದೀಪ ಸೇರಿದಂತೆ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಬಡಜನರಿಗೆ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಬೇಕೆಂದು ತಿಳಿಸಿದರು. ನಂತರ ಮಾತನಾಡಿದ ಅಧ್ಯಕ್ಷ ಜಗದೀಶ್ ಶಾಸಕ ಹರೀಶ್ ಗೌಡರ ಸಲಹೆ ಮತ್ತು ಗ್ರಾ.ಪಂ.ಸದಸ್ಯರ ಸಹಕಾರದಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ದಿ ಕಾರ್ಯ ಕೈಗೊಳ್ಳುತ್ತೇನೆಂದರು.
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇನೆ ಎಂದು ಹೇಳಿದರು . ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಆಗಬೇಕಿರುವ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರ ಪಡೆಯುತ್ತೇನೆ
ಈ ಸಂದರ್ಭದಲ್ಲಿ ವಿನೋದ್ ರಾಜ್ ಶಿವಕುಮಾರ್ ವಸಂತಕುಮಾರಿ ಶೋಭಾ ಜಯರಾಮ್ ಗಾಯಿತ್ರಿ ಕಾವೇರಮ್ಮ ಗೌರಮ್ಮ ನಾಗರತ್ನ ಸೇರಿದಂತೆ ಜೆಡಿಎಸ್ ಮುಖಂಡರು ಅನೇಕರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…