ಬಂಟ್ವಾಳ: ಜೋಗಜಪಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಮೃತ ಪಟ್ಟ ಮಹಿಳೆ.ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು , ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ ಪ್ರವಾಸಕ್ಕೆ ಹೋಗಿದ್ದರು.ಜೋಗ ತಲಪುವ ಸ್ವಲ್ಪ ದೂರವೇ ಬಸ್ ನ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದು ಪಕ್ಷಿಯಾಗಿದೆ.ಘಟನೆಯಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಂಬೀರವಾಗಿ ಗಾಯವಾಗಿತ್ತು. ಇವರೆಲ್ಲರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಮುತುವರ್ಜಿಯಿಂದ ಸಾಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು.
ಶಾಸಕರ ಸೂಚನೆಯಂತೆ ಎ.ಜೆ.ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡ ಎಲ್ಲರನ್ನು ಚಿಕಿತ್ಸೆ ನೀಡಲು ದಾಖಲು ಮಾಡಲಾಗಿತ್ತು.
ಆದರೆ ಕೈ ಹಾಗೂ ಎದೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರು ಸುಮಾರು 15 ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಭಾರತಿ ಅವರ ಮಗಳು ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಮಂಗಳೂರು ಎಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…