ಬಂಟ್ವಾಳ: ಜೋಗಜಪಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಶಂಭೂರು ಮುಂಡಜೋರ ನಿವಾಸಿ ಭಾರತಿ (55) ಮೃತ ಪಟ್ಟ ಮಹಿಳೆ.ಡಿ.15 ರಂದು ಬಂಟ್ವಾಳ ತಾಲೂಕಿನ ಶಂಭೂರು ಶ್ರೀ ಸಾಯಿ ಮಂದಿರದಿಂದ ಸುಮಾರು 55 ಮಂದಿ ಖಾಸಗಿ ಬಸ್ ನಲ್ಲಿ ಜೋಗಜಲಪಾತಕ್ಕೆ ತೆರಳಿದ್ದರು. ಶಂಭೂರು , ಬಿಸಿರೋಡು,ಪಾಣೆಮಂಗಳೂರು ಹಾಗೂ ಮಂಗಳೂರಿನಿಂದ ಬಸ್ ಮೂಲಕ ಪ್ರವಾಸಕ್ಕೆ ಹೋಗಿದ್ದರು.ಜೋಗ ತಲಪುವ ಸ್ವಲ್ಪ ದೂರವೇ ಬಸ್ ನ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದು ಪಕ್ಷಿಯಾಗಿದೆ.ಘಟನೆಯಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಂಬೀರವಾಗಿ ಗಾಯವಾಗಿತ್ತು. ಇವರೆಲ್ಲರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಮುತುವರ್ಜಿಯಿಂದ ಸಾಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು.
ಶಾಸಕರ ಸೂಚನೆಯಂತೆ ಎ.ಜೆ.ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡ ಎಲ್ಲರನ್ನು ಚಿಕಿತ್ಸೆ ನೀಡಲು ದಾಖಲು ಮಾಡಲಾಗಿತ್ತು.
ಆದರೆ ಕೈ ಹಾಗೂ ಎದೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರು ಸುಮಾರು 15 ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಭಾರತಿ ಅವರ ಮಗಳು ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಮಂಗಳೂರು ಎಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…