ಕರಾವಳಿ

ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3…!!

ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ. ಜನವರಿ 18ರ ಸಂಜೆ ಜಿಲ್ಲೆಯ ಹಲವು ಗಣ್ಯ ಅತಿಥಿಗಳಿಂದ ಸೀಸನ್-3ಗೆ ಅಧಿಕೃತ ಚಾಲನೆ ದೊರೆಯಲಿದ್ದು ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವ” ದವರೆಗೆ ಪ್ರತಿ ನಿತ್ಯ ಸಂಜೆ 4ರಿಂದ ರಾತ್ರಿ 10 ರವರೆಗೆ ಈ “ಆಹಾರೋತ್ಸವ” ನಡೆಯಲಿದೆ.

 

ಈ ಹಿಂದೆ ಜನವರಿ 15 ರಿಂದ 19 ರ ವರೆಗೆ ನಿಗದಿಯಾಗಿದ್ದ ಸ್ಟ್ರೀಟ್ ಫುಡ್ ಫಿಯೆಸ್ಟದ ದಿನಾಂಕದಲ್ಲಿ ಅಲ್ಪ ಬದಲಾವಣೆಯಾಗಿದ್ದು ಜನವರಿ 17ರ ಸಂಜೆ ಮಂಗಳೂರು ನಗರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತೆ ಹಾಗೂ ಇನ್ನಿತರ ಕಾರಣಗಳಿಗೆ ಜಿಲ್ಲಾಡಳಿತದ ಮನವಿಯ ಮೇರೆಗೆ ಸ್ಟ್ರೀಟ್ ಫುಡ್ ಫಿಯೆಸ್ಟದ ದಿನಾಂಕದಲ್ಲಿ ಬದಲಾವಣೆ ಮಾಡಲು ಕಾರ್ಯಕ್ರಮದ ಆಯೋಜಕರು ತೀರ್ಮಾನಿಸಿದ್ದಾರೆ.

ಸ್ಟ್ರೀಟ್ ಫುಡ್ ಫಿಯೆಸ್ಟಾಗೆ ಎಲ್ಲಾ ತಯಾರಿಗಳು ಭರದಿಂದ ಸಾಗಿದ್ದು ಈಗಾಗಲೇ ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ನೋಂದಾಯಿಕೊಂಡಿದ್ದು, ಕೆಲವೇ ಕೆಲವು ಮಳಿಗೆಗಳು ಮಾತ್ರ ಬಾಕಿ ಉಳಿದಿವೆ. ಆಸಕ್ತರು ಕೂಡಲೇ ಆನ್ ಲೈನ್ ಮೂಲಕವೇ ನೋಂದಾಯಿಸಿಕೊಳ್ಳುವಂತೆ ಮನವಿ.

ಕಳೆದ ಎರಡು ಆವೃತ್ತಿಗಳ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನಮನ್ನಣೆ ಪಡೆದು ಅತ್ಯಂತ ಯಶಸ್ವಿಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಸೀಸನ್-3 ಗೆ ಕ್ಷಣಗಣನೆ ಆರಂಭವಾಗಿದ್ದು ಸಾರ್ವಜನಿಕ ವಲಯದಲ್ಲಿ ಅತ್ಯುತ್ತಮ ಸ್ಪಂದನೆ ಹಾಗೂ ನಿರೀಕ್ಷೆ ಗರಿಗೆದರಿದೆ. ಈ ಹಿಂದಿನಂತೆಯೇ ಗ್ರಾಹಕರಿಗೆ ತುಳುನಾಡಿನ ಸಾಂಪ್ರದಾಯಿಕ ಆಹಾರ ಶೈಲಿ ಮಾತ್ರವಲ್ಲದೇ, ವಿಶಿಷ್ಟವಾದ ಕರಾವಳಿ ಖಾದ್ಯ, ಉತ್ತರ ಕರ್ನಾಟಕ, ಗುಜರಾತಿ, ಆಂಧ್ರ, ಪಂಜಾಬಿ ಸೇರಿದಂತೆ ದಕ್ಷಿಣ ಭಾರತೀಯ, ಉತ್ತರ ಭಾರತೀಯ, ಸಸ್ಯಾಹಾರಿ, ಮಾಂಸಾಹಾರಿ, ಹೀಗೆ ಬಹು ಬೇಡಿಕೆಯ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಮಳಿಗೆಗಳು ಇರಲಿವೆ. ಅದರಲ್ಲೂ ಈ ಬಾರಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಸಸ್ಯಾಹಾರಿ ಮತ್ತು ಮಾಂಸಹಾರಿಗಳಿಗೆ ಪ್ರತ್ಯೇಕ ಕೌಂಟರ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ಇನ್ನುಳಿದಂತೆ ಈ ಹಿಂದೆ ಇದ್ದಂತಹ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ಈ ಬಾರಿಯೂ ಸಹ ಇರಲಿದ್ದು ಮಕ್ಕಳ ಆಟದ ಜೋನ್ ಗೆ ವಿಶೇಷ ಪ್ರಾಧಾನ್ಯತೆ ನೀಡಲಾಗಿದ್ದು, ಐದೂ ದಿನಗಳಲ್ಲಿ ಏಕಕಾಲಕ್ಕೆ ಹಲವು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾನ್ವಿತರಿಗಾಗಿ “ನಮ್ಮ ವೇದಿಕೆ- ನಿಮ್ಮ ಪ್ರತಿಭೆ”, ಸೆಲ್ಫಿ ಕೌಂಟರ್, ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲು ಅವಕಾಶ, ಹೀಗೆ ಹತ್ತು ಹಲವು ಮನರಂಜನಾ-ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ.

ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಆದ್ಯತೆಯ ಜೊತೆಗೆ ಆಹಾರೋತ್ಸವ ನಡೆಯುವಲ್ಲಿ ಸ್ವಚ್ಛತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತಿರಲು ಈ ಬಾರಿಯೂ ಕ್ರಮಬದ್ಧವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು ನಿಗದಿತ ಸ್ಥಳಗಳಲ್ಲದೇ, ರಸ್ತೆಯ ಬದಿಯಲ್ಲಿ ಎಲ್ಲಿಯೂ ವಾಹನ ಪಾರ್ಕಿಂಗ್ ಮಾಡದೇ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ.

ಒಟ್ಟಾರೆಯಾಗಿ ಈ ಐದು ದಿನಗಳ ಸಂಭ್ರಮದ ವಾತಾವರಣದಲ್ಲಿ ಮಿಂದೇಳಲು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ಸರ್ವರಿಗೂ ಆದರದ ಪ್ರೀತಿಯ ಸ್ವಾಗತವನ್ನು ಕೋರುತ್ತಿದೆ. ಪತ್ರಿಕಾಗೋಷ್ಟಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಶ್ರೀ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ಶ್ರೀ ದಿವಾಕರ್ ಪಾಂಡೇಶ್ವರ್, ಪ್ರತಿಷ್ಠಾನದ ಪ್ರಮುಖರಾದ ಯತೀಶ್ ಬೈಕಂಪಾಡಿ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಜಗದೀಶ್ ಕದ್ರಿ ಮೊದಲಾದವರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

10 hours ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

10 hours ago

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…

10 hours ago

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

12 hours ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

12 hours ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

12 hours ago