ಬಂಟ್ವಾಳ: ಶ್ರೀರಾಮ ಮತ್ತು ಶ್ರೀ ಕೃಷ್ಣ ದೇಶದ ಮಣ್ಣಿನ ಚಿಂತನೆಯನ್ನು ಕೊಟ್ಟವರು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಶ್ರೀ ಕೃಷ್ಣ ಮಂದಿರ ಅಮ್ಟೂರು ಇದರ 25ನೇ ವರ್ಷದ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಿಂದೂ ಸಮಾಜ ಅಸಂಘಟಿತ ವಾಗಿದ್ದಾಗ ಈ ದೇಶಕ್ಕೆ ಮುಸಲ್ಮಾನರ ಆಕ್ರಮಣವಾಗಿತ್ತು. ಇದು ಶ್ರೀರಾಮ, ಶ್ರೀ ಕೃಷ್ಣರ ಭೂಮಿ ಹೊರತು ಇದು ಬೇರ್ಯಾರಿಗೂ ಸೇರಿದ್ದಲ್ಲ. ಈ ಬಗ್ಗೆ ಹಿಂದೂ ಸಮಾಜ ಜಾಗೃತವಾಗಿರಬೇಕು ಎಂದು ತಿಳಿಸಿದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಸ್ವಾಮೀಜಿ ಆಶೀರ್ವಚನ ನೀಡಿ 25 ವರ್ಷಗಳ ಹಿಂದೆ ಶ್ರೀ ಕೃಷ್ಣ ಮಂದಿರ ಮಂದಿರ ನಿರ್ಮಿಸುವ ಮೂಲಕ ಇಲ್ಲಿ ಧರ್ಮ ಬಿತ್ತುವ ಕೆಲಸ ಆಗಿದೆ ಎಂದರು. ಭಗವದ್ಗೀತೆಯನ್ನು ಅಳವಡಿಸಿಕೊಂಡು ಬೇರೆ ದೇಶಗಳು ಸದೃಢವಾಗಿದೆ. ಆದರೆ ಭಾರತ ಅಳವಡಿಸಿಕೊಳ್ಳದೆ ಇರುವುದರಿಂದ ಸದೃಡವಾಗಿಲ್ಲ. ಸ್ಮಾರ್ಟ್ ಸಿಟಿ ಮಂಗಳೂರು ಡ್ರಗ್ ಸಿಟಿಯಾಗುತ್ತಿದೆ. ಹಿಂದೂ ಸಮಾಜ ಸದೃಢವಾಗಬೇಕಾದರೆ ಜಾತಿಯಿಂದ ಹೊರ ಬಂದು ಹಿಂದೂ ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
ವಾಗ್ಮಿ ಹಾರಿಕಾ ಮಂಜುನಾಥ್ ಧಾರ್ಮಿಕ ಭಾಷಣ ಮಾಡಿದರು.
ಉದ್ಯಮಿಗಳಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಮಮತಾ ಶೆಟ್ಟಿ
ರವಿರಾಜ ಸಾಲೆತ್ತೂರು, ಮಹಾಬಲ ಕೊಟ್ಟಾರಿ, ಸತೀಶ್ ಆಳ್ವ ಇರಾಬಾಳಿಕೆ, ಆನಂದ ಆಳ್ವ ಗೋಳ್ತಮಜಲು, ನಿವೃತ್ತ ಸೈನಿಕ ಸೋಮಪ್ಪ ಪೂಜಾರಿ ಅಮ್ಟೂರು
ಡಾ. ಸ್ವಾಮಿ, ಶಂಕರನಾರಾಯಣ ಐತಾಳ್, ಲಕ್ಷ್ಮೀ ವಿ.ಪ್ರಭು, ಮಂದಿರದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್ ಕರಿಂಗಾಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮ್ಟೂರು ಸ್ವಾಗತಿಸಿದರು. ಮಂದಿರದ ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಅಮ್ಟೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಕೊಟ್ಟಾರಿ ಗೋಳ್ತಮಜಲು, ಸಂತೋಷ್ ಬೇಂಕ್ಯ ಕಾರ್ಯಕ್ರಮ ನಿರೂಪಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…