ಅವಕಾಡೋ, ಬೆಣ್ಣೆಯಂತೆ ಇರುವ ಬೆಣ್ಣೆ ಹಣ್ಣು ಹಲವಾರು ಪೋಷಕಾಂಶಗಳು ಹೊಂದಿದೆ. ಇದು ಪ್ರತಿಯೊಬ್ಬರಿಗೂ ಇಷ್ಟವಾಗುವಂತಹ ರುಚಿ ಹೊಂದಿದ್ದು, ಇದರಿಂದ ಸಿಗುವ ಲಾಭಗಳ ಬಗ್ಗೆ ತಿಳಿಯೋಣ.
ಆವಕಾಡೊ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂಬುದು ಗೊತ್ತಿಲ್ಲ. ಇದರಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಂ ಇದ್ದು, ನಮ್ಮ ದೇಹಕ್ಕೆ ಅಗತ್ಯವಾದ ಇತರ ಪೋಷಕಾಂಶಗಳನ್ನು ಸಹ ಇದು ಒದಗಿಸುತ್ತದೆ. ಹಾಗಾದರೆ ಬೆಣ್ಣೆಹಣ್ಣಿನ ಇತರ ಪ್ರಯೋಜನಗಳೇನು ಎಂಬುದು ಇಲ್ಲಿದೆ. ಅವಕಾಡೊದಲ್ಲಿ ಒಳ್ಳೆಯ ಕೊಬ್ಬು, ನಾರಿನಾಂಶ, ವಿಟಮಿನ್ ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್, ಮತ್ತು ಫೈಟೊಸ್ಟೆರಾಲ್ ಗಳು ಇವೆ. ತಿನ್ನಲು ರುಚಿಕರವಾಗಿ ಇರುವಂತಹ ಅವಕಾಡೊ ಹಣ್ನಿನಲ್ಲಿ ಏಕಪರ್ಯಾಪ್ತ ತೈಲವಿದೆ ಮತ್ತು ಇದು ಕ್ಯಾಲರಿ ಹೆಚ್ಚು ಮಾಡಲ್ಲ. ಆದರೆ ಆರೋಗ್ಯ ವೃದ್ಧಿಸಿ, ಜೀರ್ಣಕ್ರಿಯೆ ಸುಧಾರಿಸುವುದು, ಯಕೃತ್ ನ ಆರೋಗ್ಯ ವೃದ್ಧಿಸುವುದು. ಕೊಬ್ಬು ಸಮತೋಲಿತ ಆಹಾರ ಕ್ರಮಕ್ಕೆ ನೆರವಾಗುವುದು. ಏಕಪರ್ಯಾಪ್ತ ಮತ್ತು ಬಹುಪರ್ಯಾಪ್ತ ಕೊಬ್ಬು ದೇಹದಲ್ಲಿನ ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.ಬೆಣ್ಣೆಹಣ್ಣಿನಲ್ಲಿ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಇದ್ದು, ಇದು ನಿಮ್ಮ ಕಣ್ಣುಗಳ ಆರೋಗ್ಯಕ್ಕೆ ಹೆಚ್ಚು ಉತ್ತಮ ಎನ್ನಲಾಗುತ್ತದೆ. ನಿಮ್ಮ ಕಣ್ಣಿನ ದೃಷ್ಟಿಗೆ ಹಾನಿ ಮಾಡುವ ಕಿರಣಗಳ ವಿರುದ್ಧ ಹೋರಾಡಲು ಈ ಹಣ್ಣು ಸಹಾಯ ಮಾಡುತ್ತದೆ. ಬೆಣ್ಣೆಹಣ್ಣಿನಲ್ಲಿ ಫೈಬರ್ ಹೆಚ್ಚಾಗಿದ್ದು, ಇದು ನಿಮಗೆ ತೂಕ ಇಳಿಸಲು ಸಹಾಯ ಮಾಡುತ್ತದೆ. ಫೈಬರ್ ಇರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಹೆಚ್ಚಿನ ಸಮಯದವರೆಗೆ ಹಸಿವಾಗುವುದಿಲ್ಲ, ಇದರಿಂದ ಅನಗತ್ಯ ಆಹಾರಗಳನ್ನು ತಿನ್ನದಂತೆ ಸಹಾಯ ಮಾಡುತ್ತದೆ. ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಇ (Vitamin E) ಸಮೃದ್ದವಾಗಿ ಹೊಂದಿದ್ದು, ಇದು ನಿಮ್ಮ ನೆನಪಿನ ಶಕ್ತಿ (Memory Power) ಹೆಚ್ಚಿಸಲು ಸಹಾಯ ಮಾಡುತ್ತದೆ. ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂಬುದನ್ನ ಹಲವು ಅಧ್ಯಯನಗಳು ಸಾಬೀತು ಮಾಡಿದೆ. ಬೆಣ್ಣೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ಗಳು ಮತ್ತು ಸಕ್ಕರೆ ಕಡಿಮೆ ಇದ್ದು, ಇದು ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಹಣ್ಣು ಎನ್ನಲಾಗುತ್ತದೆ. ಇದು ಟೈಪ್ 2 ಮಧುಮೇಹವನ್ನು ಶೇಕಡ 20ರಷ್ಟು ಕಡಿಮೆ ಮಾಡುತ್ತದೆ. ಇಷ್ಟೆಲ್ಲಾ ಸಹಾಯಕಾರಿ ಆವಕಾಡೊ ಹಣ್ಣು ತಿನ್ನಲು ಬಲು ರುಚಿ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…