ಜನ ಮನದ ನಾಡಿ ಮಿಡಿತ

Advertisement

ರಾಜ್ಯದ ಪ್ರಸಿದ್ಧ ಕ್ಷೇತ್ರದಲ್ಲೂ ಉದ್ಘಾಟನೆಗೊಳ್ಳಲಿದೆ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್

ರಾಜ್ಯದ ಪ್ರಸಿದ್ಧ ಕ್ಷೇತ್ರದಲ್ಲೂ ಉದ್ಘಾಟನೆಗೊಳ್ಳಲಿದೆ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್

ಧರ್ಮಸ್ಥಳ : ತಿರುಪತಿ, ಮಂತ್ರಾಲಯಗಳಂತಹ ಪ್ರಸಿದ್ಧ ದೇವಾಲಯಗಳಲ್ಲಿ ಭಕ್ತರ ದಟ್ಟಣೆ ಕಡಿಮೆ ಮಾಡಲು ಮತ್ತು ಭಕ್ತರ ಹಿತ ದೃಷ್ಟಿಯಿಂದ ನಿರ್ಮಿಸಲಾಗಿರುವ ಕ್ಯೂ ಕಾಂಪ್ಲೆಕ್ಸ್ ನಂತೆ, ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಧರ್ಮಸ್ಥಳದಲ್ಲೂ  ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಯ ನೂತನ ಸಂಕೀರ್ಣ “ಶ್ರೀ ಸಾನಿಧ್ಯ” ವನ್ನು ನಿರ್ಮಿಸಲಾಗಿದೆ. ಸುಸಜ್ಜಿತ ಸೌಕರ್ಯಗಳನ್ನೊಳಗೊಂಡ ನೂತನ ಶ್ರೀ ಸಾನಿಧ್ಯ ಸಂಕೀರ್ಣ ಇಂದು (ಮಂಗಳವಾರ) ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್​ ಅವರು ಉದ್ಘಾಟಿಸಲಿದ್ದಾರೆ.

ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಭಕ್ತರಿಗೆ ಹೀಗಾಗಿ ಜನರಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆ ಅನಿವಾರ್ಯವಾಗಿದ್ದು,  ಇಂದು ಶ್ರೀ ಸಾನಿಧ್ಯ ಸಂಕೀರ್ಣದ ಉದ್ಘಾಟನೆಯಾಗಲಿದೆ. ಈ ಸಂಕೀರ್ಣವು 2,75,177 ಚದರ ಅಡಿಯಲ್ಲಿ ನಿರ್ಮಾಣಗೊಂಡಿದ್ದು, ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಭಕ್ತರಿಗೆ ಎಲ್ಲ ಸೌಲಭ್ಯ ನೀಡಲಾಗಿದೆ. 2 ಅಂತಸ್ಥಿನ ಶ್ರೀ ಸಾನಿಧ್ಯ ಸಂಕೀರ್ಣದಲ್ಲಿ ಒಟ್ಟು 16 ವಿಶಾಲ ಭವನಗಳಿವೆ. ಪ್ರತಿ ಭವನದಲ್ಲಿ ಏಕಕಾಲದಲ್ಲಿ 600 ಜನ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸಕಲ ಸೌಕರ್ಯಗಳನ್ನು ನೀಡಲಾಗಿದೆ. ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದ್ದು, ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿದ್ದು, ಹವಾನಿಯಂತ್ರಿತ ಸೌಕರ್ಯ ಕಲ್ಪಿಸಲಾಗಿದೆ. ಭಕ್ತರ ಸಂಖ್ಯೆಯನ್ನು ನಿರ್ಧರಿಸಿ ಭವನದೊಳಗೆ ಕಳುಹಿಸಲು ಎಐ ತಂತ್ರಜ್ಞಾನ ಆಧಾರಿತ ಕ್ಯಾಮೆರಾ ಅಳವಡಿಸಲಾಗಿದೆ. ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಶ್ರೀ ಸಾನಿಧ್ಯ ಸಂಕೀರ್ಣದ ಭವನಗಳ ದ್ವಾರದಲ್ಲಿ ಸೇವಾ ರಶೀದಿಯ ಕೌಂಟರ್ ಇರಲಿದ್ದು, ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಮಕ್ಕಳ ಆರೈಕೆ ಕೊಠಡಿ ಸೌಲಭ್ಯವನ್ನೂ ಕೊಡಲಾಗಿದೆ. ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದ 6-7 ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!