ಮಂಗಳೂರು: “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ “ಅಂದು ಬೆಳಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ“ ಎಂದು ಹೇಳಿದರು.
ವೇದಿಕೆಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…