ಮಂಗಳೂರು: “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ “ಅಂದು ಬೆಳಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ“ ಎಂದು ಹೇಳಿದರು.
ವೇದಿಕೆಯಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…