ಜನ ಮನದ ನಾಡಿ ಮಿಡಿತ

Advertisement

ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಚೆಕ್ ಹಸ್ತಾಂತರ..!

ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಯೋಜನೆಯಡಿ ರೂ. 8,00,000/- (ರೂಪಾಯಿ ಎಂಟು ಲಕ್ಷ) ಮೊತ್ತದ ಚೆಕ್ ಶಾಸಕ ವೇದವ್ಯಾಸ್ ಕಾಮತ್ ರವರು ಹಸ್ತಾಂತರಿಸಿದರು

ಆಕಸ್ಮಿಕವಾಗಿ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಪ್ರಜೀತ್ ರವರನ್ನು ರಕ್ಷಿಸಲು ಅಲ್ಲೇ ಇದ್ದ ಶಿವಾನಂದ ಮತ್ತು ಅವಿನಾಶ್ ಎಂಬ ಮೀನುಗಾರರು ಜೀವದ ಹಂಗು ತೊರೆದು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ನಂತರದ ದಿನಗಳಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕರು ಸರ್ಕಾರದಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಲಭಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವ ಕುರಿತು ಮಂಗಳೂರಿನ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ (ಪ್ರಭಾರ) ಶ್ರೀ ದಿಲೀಪ್ ಕುಮಾರ್ ರವರು ಸರ್ಕಾರಕ್ಕೆ ಸೂಕ್ತ ದಾಖಲೆಗಳ ಸಹಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದೀಗ ಪರಿಹಾರ ಮೊತ್ತ ವಿತರಣೆಯಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!