ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಯೋಜನೆಯಡಿ ರೂ. 8,00,000/- (ರೂಪಾಯಿ ಎಂಟು ಲಕ್ಷ) ಮೊತ್ತದ ಚೆಕ್ ಶಾಸಕ ವೇದವ್ಯಾಸ್ ಕಾಮತ್ ರವರು ಹಸ್ತಾಂತರಿಸಿದರು
ಆಕಸ್ಮಿಕವಾಗಿ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಪ್ರಜೀತ್ ರವರನ್ನು ರಕ್ಷಿಸಲು ಅಲ್ಲೇ ಇದ್ದ ಶಿವಾನಂದ ಮತ್ತು ಅವಿನಾಶ್ ಎಂಬ ಮೀನುಗಾರರು ಜೀವದ ಹಂಗು ತೊರೆದು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ನಂತರದ ದಿನಗಳಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕರು ಸರ್ಕಾರದಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಲಭಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವ ಕುರಿತು ಮಂಗಳೂರಿನ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ (ಪ್ರಭಾರ) ಶ್ರೀ ದಿಲೀಪ್ ಕುಮಾರ್ ರವರು ಸರ್ಕಾರಕ್ಕೆ ಸೂಕ್ತ ದಾಖಲೆಗಳ ಸಹಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದೀಗ ಪರಿಹಾರ ಮೊತ್ತ ವಿತರಣೆಯಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…