ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ ಕುಟುಂಬಕ್ಕೆ ಕರ್ನಾಟಕ ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಯೋಜನೆಯಡಿ ರೂ. 8,00,000/- (ರೂಪಾಯಿ ಎಂಟು ಲಕ್ಷ) ಮೊತ್ತದ ಚೆಕ್ ಶಾಸಕ ವೇದವ್ಯಾಸ್ ಕಾಮತ್ ರವರು ಹಸ್ತಾಂತರಿಸಿದರು
ಆಕಸ್ಮಿಕವಾಗಿ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಪ್ರಜೀತ್ ರವರನ್ನು ರಕ್ಷಿಸಲು ಅಲ್ಲೇ ಇದ್ದ ಶಿವಾನಂದ ಮತ್ತು ಅವಿನಾಶ್ ಎಂಬ ಮೀನುಗಾರರು ಜೀವದ ಹಂಗು ತೊರೆದು ಪ್ರಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. ನಂತರದ ದಿನಗಳಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಶಾಸಕರು ಸರ್ಕಾರದಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಲಭಿಸುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ನೊಂದ ಕುಟುಂಬಕ್ಕೆ ಪರಿಹಾರ ಧನ ಮಂಜೂರು ಮಾಡುವ ಕುರಿತು ಮಂಗಳೂರಿನ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ (ಪ್ರಭಾರ) ಶ್ರೀ ದಿಲೀಪ್ ಕುಮಾರ್ ರವರು ಸರ್ಕಾರಕ್ಕೆ ಸೂಕ್ತ ದಾಖಲೆಗಳ ಸಹಿತ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಇದೀಗ ಪರಿಹಾರ ಮೊತ್ತ ವಿತರಣೆಯಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…