ಪೊಲೀಸ್ ಠಾಣಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದ ಮಿಯಾರ್ ಗ್ರಾಮದಲ್ಲಿ ನಡೆದಿದೆ. ನಗರದ ಪೊಲೀಸ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ನೇಣಿಗೆ ಶರಣಾಗಿದ್ದು ಬಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೆಲವು ದಿನಗಳಿಂದ ಕರ್ತವ್ಯದಿಂದ ರಜೆ ಪಡೆದುಕೊಂಡಿದ್ದ ಪ್ರಶಾಂತ್ ಅವರು ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.



