ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.
ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…