ಉಡುಪಿ: ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.
ಬೆಂಕಿ ಬ್ಯಾಚ್ಮೇಟ್ಸ್ ಪ್ರೊಡಕ್ಷನ್ ಮತ್ತು ಕೋಣನೂರು ಪ್ರೊಡಕ್ಷನ್ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಿನೆಮಾ ನಿರ್ದೇಶಕ ಪೃಥ್ವಿ ಕೋಣನೂರು ‘ದ್ವಮ್ದ್ವ’ ಚಲನಚಿತ್ರವನ್ನು ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಳಿಸಿದರು. ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ನ ಮುಖ್ಯಸ್ಥ ಪ್ರೊ.ವರದೇಶ ಹಿರೇಗಂಗೆ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
‘ದ್ವಮ್ದ್ವ’ ಚಲನಚಿತ್ರದ ನಿರ್ದೇಶಕ ಕ್ಲಿಂಗ್ ಜಾನ್ಸನ್ ಮಾತನಾಡಿ, ಈ ಸಿನೆಮಾ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಕನ್ನಡ ಮೊದಲ ಕ್ವೀರ್ ಚಲನಚಿತ್ರವಾಗಿದೆ. ಇಂದು ಕರಾವಳಿ ಪಟ್ಟಣವಾದ ಉಡುಪಿಯಲ್ಲಿ ವಾಸಿಸುವ ಚುಕ್ಕಿಯ ಜೀವನದ ಸುತ್ತ ಸುತ್ತತ್ತದೆ. ಅವರು ವಿಶಿಷ್ಟವಾದ ಸಂಪ್ರದಾಯಿಕ ಕಲೆಯಾದ ಯಕ್ಷಗಾನದಲ್ಲಿ ಸ್ತ್ರೀಪಾತ್ರವನ್ನು ನಿರ್ವಹಿಸುತ್ತಿರು ತ್ತಾರೆ. ಈ ಚಿತ್ರ ಚುಕ್ಕಿಯ ಜೀವದ ಹೋರಾಟಗಳ, ಸೂಕ್ಷ್ಮವಾದ ವಿಚಾರವನ್ನು ಬಿಂಬಿಸುತ್ತದೆ ಎಂದರು.
ಈ ಸಿನೆಮಾ ಕೋಣನೂರು ಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್ನಲ್ಲಿ ಲಭ್ಯ ಇದ್ದು, ಎಲ್ಲರೂ ವೀಕ್ಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಸಿನೆಮಾ ವೀಕ್ಷಣೆಯ ಬಳಿಕ ನಿರ್ದೇಶಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಟರಾದ ಭಾಸ್ಕರ್ ಮಣಿಪಾಲ, ಪ್ರಭಾಕರ ಕುಂದರ್, ಬೆನ್ಸು ಪೀಟರ್, ರಾಜೇಂದ್ರ ನಾಯಕ್, ಭಾರತಿ ಟಿ.ಕೆ., ಸಂದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…