ಸುಳ್ಯ, ಜು.16: ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಆಗಸ್ಟ್ 18ರೊಳಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ನ್ಯಾಯಾಲಯದ ನಿರ್ದೇಶನದಂತೆ ನಗರದಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.ಈ ಹಿಂದೆ ಎನ್ಐಎ ಜೂನ್ 30ಕ್ಕೆ ಗಡುವು ನೀಡಿದ್ದು, ಆರೋಪಿಗಳ ಆಸ್ತಿ ಮತ್ತು ಮನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಆರೋಪಿ ಶರಣಾಗಲು ವಿಫಲನಾಗಿದ್ದ. ಇದರಿಂದಾಗಿ ಎರಡನೇ ಬಾರಿ ಎಚ್ಚರಿಕೆ ನೀಡಲಾಗಿದ್ದು, ಇದೀಗ ಜಪ್ತಿಯಾಗುವುದು ಖಚಿತವಾಗಿದೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ಆರೋಪಿಗಳ ಮನೆಗಳಿಗೆ ನೋಟಿಸು ನೀಡಿದ್ದು, ಧ್ವನಿವರ್ಧಕದ ಮೂಲಕವೂ ಎಚ್ಚರಿಕೆಯ ಸಂದೇಶ ನೀಡಲಾಗಿದೆ.



