ಜನ ಮನದ ನಾಡಿ ಮಿಡಿತ

Advertisement

ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಕಡಬತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಜ.10ರಂದು ಸಂಭವಿಸಿದೆ. ಕಡಬ ತಾಲೂಕು ಆಲಂಕಾರು ಗ್ರಾಮದ ಕಮ್ಮಿತ್ತಿಲು ದಯಾನಂದ ಗೌಡರ ಪತ್ನಿ ಪುಷ್ಪಾವತಿ (34ವ) ಮೃತಪಟ್ಟವರು. ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಇವರು ಬಳಿಕ ಐತ್ತೂರು ಹೊಸಕ್ಲು ತಾಯಿಯ ಮನೆಗೆ ಮೂರು ತಿಂಗಳ ಬಾಣಂತಿ ಆರೈಕೆಗೆ ಹೋಗಿದ್ದು ತಾಯಿ ಮಗು ಆರೋಗ್ಯವಾಗಿದ್ದರು ಎಂದು ಮನೆಯವರು ತಿಳಿಸಿದ್ದಾರೆ.

ಎರಡು ತಿಂಗಳು ಕಳೆದ ನಂತರ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂತಾನ ಹರಣ ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆ, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜ.10 ರಂದು ಕೊನೆಯುಸಿರೆಳೆದರು.

ಮೃತರು ಪತಿ ದಯಾನಂದ ಗೌಡ, ಪುತ್ರಿಯರಾದ ಎರಡು ತಿಂಗಳ ಹೆಣ್ಣು ಮಗು ಯಶ್ಚಿತಾ, ಗುಣಶ್ರೀ, ಹಂಶಿ, ರಿಷಿಕಾ ರವರನ್ನು ಅಗಲಿದ್ದಾರೆ.

ಈಸಾವಿಗೆ ಮತ್ತು ಮಕ್ಕಳ ಕಣ್ಣೀರಿಗೆ ಯಾರು ಹೊಣೆ: ಮೃತರ ಅಂತ್ಯ ಸಂಸ್ಕಾರದ ವೇಳೆ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ತಿಂಗಳ ಹಸುಗೂಸು ಹಾಗು ಮೂರು ಹೆಣ್ಣುಮಕ್ಕಳ ಕಣ್ಣೀರಿಗೆ ಕಾರಣರು ಯಾರು? ಎಂದು ನೆರೆದವರು ಪ್ರಶ್ನಿಸುತ್ತಿದ್ದರು. ಮೃತಪಟ್ಟ ಪುಷ್ಪಾವತಿಯವರಿಗೆ ಆರೋಗ್ಯದ ಸಮಸ್ಯೆ ಇತ್ತೇ ಎಂದು ಮುಂದಿನ ತನಿಖೆಯಲ್ಲಿ ಮ ಗೊತ್ತಾಗಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮೃತ ಪುಷ್ಪಾವತಿ ಅವರು ಕೃಷಿಕರಾಗಿದ್ದು, ಹೈನುಗಾರರಾಗಿದ್ದು, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!