ಹಾಸನ : ಪ್ರೀತಿಸಿದ ಹುಡುಗಿ ಹಾಗೂ ಪೊಲೀಸರ ನಡೆ ಬಗ್ಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವನ್ನಪ್ಪಿದ್ದಾನೆ. ಪ್ರೀತಿಸಿದ ಯುವತಿಯಿಂದ ಮನನೊಂದು ವಿಷ ಸೇವಿಸಿದ್ದ ಪ್ರಿಯಕರ ಚಿಕಿತ್ಸೆ ಫಲಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ (Sakleshpur) ತಾಲೂಕಿನ ಬಾಳೆಗದ್ದೆ ಗ್ರಾಮದ ಕವನ್ (30) ಆತ್ಮಹತ್ಯೆಗೆ ಶರಣಾದ ಯುವಕ. ಸಾಯುವ ಮುನ್ನ ಕವನ್ ಸಾವಿಗೆ ಕಾರಣ ತಿಳಿಸಿ ವೀಡಿಯೋ ಮಾಡಿಟ್ಟು ಒಂದು ವಾರದ ಹಿಂದೆ ವಿಷ ಸೇವಿಸಿದ್ದ. ನನ್ನ ಸಾವಿಗೆ ತಾನುಪ್ರೀತಿಸಿದ ಹುಡುಗಿ ಹಾಗೂ ವಿನಯ್ ಎಂಬಾತ ಕಾರಣ ಎಂದು ವಿಡಿಯೋದಲ್ಲಿ ಎಳೆಎಳೆಯಾಗಿ ಯುವಕ ಕಾರಣ ಬಿಚ್ಚಿಟ್ಟಿದ್ದಾನೆ. ಅಲ್ಲದೇ ಪೊಲೀಸರ ಕ್ರಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾನೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…