ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆ ಯಲ್ಲಿ ಶನಿವಾರ ಸಂಜೆ ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಮಗು. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.
ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು.ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…